ಗದಗ:- ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆಯಲ್ಲಿ ಮಕ್ಕಳಿಗೆ ನೀಡಬೇಕಿದ್ದ ಪೌಷ್ಟಿಕ ಆಹಾರ ಪದಾರ್ಥಗಳನ್ನು ಅಡುಗೆ ಸಿಬ್ಬಂದಿಗಳು ಕದ್ದು ಸಾಗಾಟ ಮಾಡುವಾಗ ರೆಡ್ ಹ್ಯಾಂಡ್ ಆಗಿ ಗ್ರಾಮಸ್ಥರು ಹಿಡಿದಿರುವಂತಹ ಘಟನೆ ಜರುಗಿದೆ.
Advertisement
ಶಾಲೆಯ ಐವರು ಅಡುಗೆ ಸಹಾಯಕರಿಂದ ಪೌಷ್ಠಿಕ ಆಹಾರ ಸಾಗಾಟ ಮಾಡಲಾಗುತ್ತಿತ್ತು. 35 ಕೆಜಿ ಅಕ್ಕಿ, ಎರಡು ಕೆಜಿ ಬೇಳೆ, ಹಾಲಿನ ಪುಡಿಯ ಎರಡು ಪ್ಯಾಕೆಟ್, 10 ಕೆಜಿ ಗೋಧಿ ಪ್ಯಾಕೆಟ್ ಸಾಗಾಟ ಮಾಡಲಾಗುತಿತ್ತು.
ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.