ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ: ಕೋರ್ಟ್‌ʼಗೆ ಚಾರ್ಜ್‌ಶೀಟ್ ಸಲ್ಲಿಕೆ

0
Spread the love

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ ಪೊಲೀಸರು. ನಂಬರ್ ಬ್ಲಾಕ್ ಮಾಡಿದ್ದಕ್ಕೆ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಉಲ್ಲೇಖಿಸಿದ್ದಾರೆ. 494 ಪುಟಗಳ ಚಾರ್ಜ್‌ಶೀಟ್ ಇದಾಗಿದ್ದು, 85 ಸಾಕ್ಷ್ಯಗಳನ್ನು ಉಲ್ಲೇಖ ಮಾಡಿದ್ದಾರೆ.

Advertisement

ಆರೋಪಿ ಗಿರೀಶ್ ಮೈಸೂರಿನ ಮಹಾರಾಜ ಹೋಟೆಲ್ ಆವರಣದ ಎಂಎಸ್ಸಿ ಪಬ್ ಆ್ಯಂಡ್ ಬಾರ್​ನಲ್ಲಿ ಕೆಲಸ ಮಾಡುತ್ತಿದ್ದ. ಗಿರೀಶ್ ಕೆಲಸ ಮಾಡುವ ಸಮಯದಲ್ಲಿಯೇ 3 ರಿಂದ 4 ಬಾರಿ ಅಂಜಲಿ, ಗಿರೀಶ್ ಭೇಟಿಗೆ ತೆರಳಿದ್ದರು. 2024 ರ ಎಪ್ರೀಲ್​ನಲ್ಲಿ ಇಬ್ಬರ ನಡುವೆ ಮನಸ್ತಾಪವಾಗಿದೆ. ಈ ವೇಳೆ ಗಿರೀಶ್ ಕರೆಯನ್ನು ಅಂಜಲಿ ಸ್ವೀಕರಿಸಿಲ್ಲ. ಇದಲ್ಲದೆ ಅಂಜಲಿ ಗಿರೀಶ್ ನಂಬರ್ ಬ್ಲಾಕ್ ಮಾಡಿದ್ದಳು. ಹೀಗಾಗಿ ಅಂಜಲಿ ಮನೆಗೆ ಬಂದು ಕೊಲೆ ಮಾಡಿದ್ದಾನೆಂದು ದೋಷಾರೋಪ ಪಟ್ಟಿಯಲ್ಲಿ ನಮೂದಿಸಲಾಗಿದೆ.

ಮೈಸೂರಿನಿಂದಲೇ ಚಾಕು ತಂದಿದ್ದ ಹಂತಕ ಗಿರೀಶ್, ಮೈಸೂರಿನ ಬಸ್ ನಿಲ್ದಾಣದ ಪಕ್ಕ ಗುರುತು ಸಿಗಬಾರದು ಎನ್ನುವ ಕಾರಣಕ್ಕೆ ಮಾಸ್ಕ್ ಖರೀದಿ ಮಾಡಿದ್ದ. ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಗಿರೀಶ್​, ಮೇ. 17 ರಂದು ಮೈಸೂರಿನಿಂದ ಬೆಳಗಾವಿಗೆ ವಿಶ್ವ ಮಾನವ ರೈಲಿನಲ್ಲಿ ಪ್ರಯಾಣ ಮಾಡುವಾಗ ರೈಲ್ವೆ ಪೊಲೀಸರು ಕೈಗೆ ಸಿಕ್ಕಿ ಬಿದ್ದಿದ್ದ.

ರೈಲಿನಲ್ಲಿ ಮಹಿಳಾ ಪ್ರಯಾಣಿಕರ ಜೊತೆ ಕಿರಿಕ್ ಮಾಡಿಕೊಂಡು, ದಾವಣಗೆರೆ ಬಳಿ ರೈಲಿನಿಂದ ಬಿದ್ದು ಗಾಯ ಮಾಡಿಕೊಂಡಿದ್ದ. ಇನ್ನು ಅಂಜಲಿ ಕೊಲೆ ಪ್ರಕರಣದ ಹಿನ್ನಲೆ ನಾಲ್ಕು ಜನ ಪೊಲೀಸ್ ಅಧಿಕಾರಿಗಳ ತಲೆದಂಡವೂ ಆಗಿತ್ತು. ಇದೀಗ ಕೊಲೆ ನಡೆದ 98 ದಿನಗಳ ಬಳಿಕ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here