HomeCrime Newsಅಕ್ರಮ ಶ್ರೀಗಂಧ ವಶಕ್ಕೆ; ಆರೋಪಿಗಳ ಬಂಧನ

ಅಕ್ರಮ ಶ್ರೀಗಂಧ ವಶಕ್ಕೆ; ಆರೋಪಿಗಳ ಬಂಧನ

Spread the love

ವಿಜಯಸಾಕ್ಷಿ ಸುದ್ದಿ, ಶಿವಮೊಗ್ಗ

ಇಲ್ಲಿನ ಹೊಸನಗರ ತಾಲೂಕಿನ ಬಾವಿಯೊಂದರಲ್ಲಿ ಅಕ್ರಮವಾಗಿ ಬಚ್ಚಿಟ್ಟಿದ್ದ ಸುಮಾರು 3 ಲಕ್ಷಕ್ಕೂ ಅಧಿಕ ಮೌಲ್ಯದ 38 ಕೆ.ಜಿ. ಶ್ರೀಗಂಧ ವಶಪಡಿಸಿಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ‌‌.

ಶ್ರೀಗಂಧದ ತುಂಡುಗಳನ್ನು ಬಾಣಿಗ ವಾಸಿ ಹನೀಫ್ ಸಾಬ್ ಎಂಬಾತ ಅಕ್ರಮವಾಗಿ ಯಾರಿಗೂ ಗೊತ್ತಾಗದಂತೆ ಬಾವಿಯೊಳಗೆ ಪಂಪ್ ಸೆಟ್ ಇಳಿಸುವಂತೆ ಶ್ರೀಗಂಧವನ್ನು ಚೀಲದೊಳಗೆ ತುಂಬಿ ಬಾವಿಗೆ ಇಳಿಸಿ ಸಂಗ್ರಹಿಸಿಟ್ಟಿದ್ದ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಶಿವಮೊಗ್ಗದ ಅರಣ್ಯ ಸಂಚಾರಿ ದಳ ಮತ್ತು ಹೊಸನಗರ ಅರಣ್ಯ ವಲಯ ಅಧಿಕಾರಿಗಳ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಹೊಸನಗರ ಅರಣ್ಯ ವಲಯ ವ್ಯಾಪ್ತಿಯ ಬಾಣಿಗ ಗ್ರಾಮದಲ್ಲಿ ಬಾವಿಯಲ್ಲಿ ಬಚ್ಚಿಟ್ಟಿದ್ದ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.

ಅರಣ್ಯಾಧಿಕಾರಿಗಳು ಮೊದಲು ಆರೋಪಿ ಹನೀಫ್ ನನ್ನು ಬಂಧಿಸಿದ್ದು, ಬಳಿಕ ಆತನ ಹೇಳಿಕೆ ಆಧರಿಸಿ ಕೃತ್ಯದಲ್ಲಿ ಭಾಗಿಯಾದ ತಾಲೂಕಿನ ದುಮ್ಮಾ ನಿವಾಸಿ ಮಂಜುನಾಥ್, ಹೊಸಕೆಸರೆ ಹಾಲೇಶ್, ಸಾಗರದ ಶಿವಪ್ಪನಾಯಕ ಮತ್ತು ರಸ್ತೆ ವಾಸಿಯಾದ ಮಂಜುನಾಥ್ ಎಂಬುವವರನ್ನು ಬಂಧಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಕೃಷ್ಣಯ್ಯಗೌಡ ಸ್ಪಷ್ಟನೆ ನೀಡಿದ್ದಾರೆ.

ಕಾರ್ಯಾಚರಣೆಯಲ್ಲಿ ಶಿವಮೊಗ್ಗ ಅರಣ್ಯ ಸಂಚಾರಿದಳದ ಎಸಿಎಫ್ ಬಾಲಚಂದ್ರ, ಹೊಸನಗರ ಎಸಿಎಫ್ ಶಿವಮೂರ್ತಿ, ವಲಯ ಅರಣ್ಯಾಧಿಕಾರಿ ಕೃಷ್ಣಯ್ಯಗೌಡ ಅರಣ್ಯ ಸಿಬ್ಬಂದಿಗಳು ಭಾಗಿಯಾಗಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!