ಯಡಿಯೂರಪ್ಪಗೆ ಬಂಧನ ಭೀತಿಯಿಂದ ತಾತ್ಕಾಲಿಕ ರಿಲೀಫ್!

0
Spread the love

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪದಲ್ಲಿ ಮಾಜಿ ಸಿಎಂ, ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ಹೈಕೋರ್ಟ್​​ನಲ್ಲಿ ತುಸು ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶವನ್ನು ಕೋರ್ಟ್ ಮುಂದುವರಿಸಿದೆ. ಬಿಎಸ್​ವೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ,

Advertisement

ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ.  ಸಿಐಡಿ ಪರ ವಕೀಲರು, ಬಿಎಸ್​ವೈ ವಿರುದ್ಧ ಹೆಚ್ಚುವರಿ ಆರೋಪಪಟ್ಟಿ ದಾಖಲಿಸಲಾಗಿದೆ. ಆರೋಪಪಟ್ಟಿಯ ಪ್ರತಿ ಸಲ್ಲಿಸಲು ಕಾಲಾವಕಾಶ ಬೇಕಿದೆ ಎಂದು ಸಿಐಡಿ ಪರ ಎಸ್​ಪಿಪಿ ಅಶೋಕ್ ನಾಯ್ಕ್ ಮನವಿ ಮಾಡಿದರು. ಅಂತಿಮವಾಗಿ ವಿಚಾರಣೆ ಮುಂದೂಡಿಕೆಯಾಯಿತು.

 


Spread the love

LEAVE A REPLY

Please enter your comment!
Please enter your name here