ಗುಡ್ಡಾಪೂರ ದಾನಮ್ಮದೇವಿ ತೊಟ್ಟಿಲೋತ್ಸವ

0
Guddapur Danammadevi cradle festival
Spread the love

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ದೇವರನ್ನು ಭಕ್ತಿ ಪೂರ್ವಕವಾಗಿ ಪೂಜಿಸಿದಲ್ಲಿ ಮನಸ್ಸಿಗೆ ಶಾಂತಿ-ನೆಮ್ಮದಿ ದೊರಕಲಿದೆ. ಆ ಮೂಲಕ ನೀವು ಕೈಗೊಳ್ಳುವ ಕಾರ್ಯಗಳಲ್ಲಿ ಯಶಸ್ವಿ ದೊರೆಯಲು ಸಾಧ್ಯ ಎಂದು ಮೈಸೂರು ಮಠದ ವಿಜಯಮಹಾಂತ ಸ್ವಾಮೀಜಿ ಹೇಳಿದರು.

Advertisement

ಪಟ್ಟಣದ ಮೈಸೂರು ಮಠದಲ್ಲಿ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಶ್ರಾವಣ ಮಾಸದ ನಿಮಿತ್ತ ಗುಡ್ಡಾಪೂರ ದಾನಮ್ಮದೇವಿ ಪುರಾಣ ಕಾರ್ಯಕ್ರಮದಲ್ಲಿ ದಾನಮ್ಮದೇವಿ ತೊಟ್ಟಿಲೋತ್ಸವ ಹಾಗೂ ಉಡಿ ತುಂಬುವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಪುರಾಣ, ಪ್ರವಚನದಲ್ಲಿ ಬರುವ ಸನ್ನಿವೇಶವನ್ನು ಇಂದಿನ ಕಾಲದ ಜನರಿಗೆ ತೋರಿಸುವ ಸಲುವಾಗಿ ಶ್ರೀಮಠದಲ್ಲಿ ಪುರಾಣ ನಡೆಸಲಾಗುತ್ತಿದೆ. ವೀರಶೈವ ಲಿಂಗಾಯತ ಸಮಾಜದವರು ತೊಟ್ಟಿಲೋತ್ಸವ ಹಾಗೂ ಉಡಿ ತುಂಬುವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡಿರುವುದು ಶ್ಲಾಘನೀಯ ಎಂದರು.

ತೊಟ್ಟಿಲನ್ನು ಕೊಪ್ಪಳ ತಾಲೂಕಿನ ಕಿನ್ಯಾಳ ಗ್ರಾಮದಿಂದ ಸಂಪ್ರದಾಯದಂತೆ ವಿವಿಧ ವಾದ್ಯಗಳೊಂದಿಗೆ ಶ್ರೀಮಠಕ್ಕೆ ತರಲಾಯಿತು. ವೇದಮೂರ್ತಿಗಳಾದ ಮಲ್ಲಯ್ಯಸ್ವಾಮಿ ಗುರುಸ್ಥಳಮಠ, ಗುರಲಿಂಗಯ್ಯ ಹಿರೇಮಠ, ಶಾಂತಯ್ಯ ಶಾಂತಗೇರಿಮಠ ತೊಟ್ಟಿಲೋತ್ಸವ ಕಾರ್ಯಕ್ರಮ ನಡೆಸಿಕೊಟ್ಟರು.

ವೀರಶ್ಯವ ಲಿಂಗಾಯತ ಸಮಾಜದ ಅಧ್ಯಕ್ಷ ಸಿದ್ದಪ್ಪ ಬಂಡಿ, ಪುರಾಣ ಸಮಿತಿ ಅಧ್ಯಕ್ಷ ಟಿ.ಎಸ್. ರಾಜೂರ, ಯುವ ಘಟಕದ ಅಧ್ಯಕ್ಷ ಅಪ್ಪು ಮತ್ತಿಕಟ್ಟಿ, ಎ.ಪಿ. ಗಾಣಿಗೇರ, ಡಾ. ಬಿ.ವ್ಹಿ. ಕಂಬಳ್ಯಾಳ, ಎಸ್.ಎಸ್. ವಾಲಿ, ಪ್ರಭು ಚವಡಿ, ಮಲ್ಲಿಕಾರ್ಜುನ ಹಿರೇಮನಿ, ಶಿವು ಕೋರಧಾನ್ಯಮಠ, ಶರಣಪ್ಪ ರೇವಡಿ, ಮೋಹನ ಕನಕೇರಿ, ಶಿವಪುತ್ರಪ್ಪ ಸಂಕನೂರ, ಬಾಳು ಕುಂಬಾರ, ದೇವಪ್ಪ ಮಡಿವಾಳರ, ಚಿದಾನಂದಪ್ಪ ಹಡಪದ, ಸಂಗಪ್ಪ ಕುಂಬಾರ, ವಿದ್ಯಾ ಬಂಡಿ, ಮಂಜುಳಾ ಕೋರಧಾನ್ಯಮಠ, ಲಲಿತಾ ಗೊಂಗಡಶೆಟ್ಟಿಮಠ, ಅನ್ನಪೂರ್ಣಾ ಗಾಣಿಗೇರ, ಸುಮಾ ಲಕ್ಕುಂಡಿಮಠ, ಶ್ವೇತಾ ಕಾರಡಗಿಮಠ, ಕಸ್ತೂರೆಮ್ಮಾ ಹಿರೇಮಠ, ಪ್ರೇಮಕ್ಕಾ ವಸ್ತçದ ಸೇರಿ ಇತರರು ಇದ್ದರು.


Spread the love

LEAVE A REPLY

Please enter your comment!
Please enter your name here