ಅನಾರೋಗ್ಯ ಹಿನ್ನೆಲೆ: ಬಿಜೆಪಿ ಮುಖಂಡ ಎಸ್ ಸುರೇಶ್ ಕುಮಾರ್ ಗೆ ICU ನಲ್ಲಿ ಚಿಕಿತ್ಸೆ!

0
Spread the love

ಬೆಂಗಳೂರು:- ಅನಾರೋಗ್ಯ ಹಿನ್ನೆಲೆ, ಬಿಜೆಪಿ ಮುಖಂಡ ಎಸ್ ಸುರೇಶ್ ಕುಮಾರ್ ಗೆ ICU ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement

ಸುರೇಶ್ ಕುಮಾರ್ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ದಿನಗಳಿಂದ ಬಹಳ ಆಯಾಸಗೊಂಡಿದ್ದ ಸುರೇಶ್ ಕುಮಾರ್ ಅವರು ಅಪರೂಪದ ಜ್ವರಕ್ಕೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರು ಪಾದಯಾತ್ರೆ ಬಳಿಕ, ತಿರುಪತಿ ಪ್ರವಾಸ ಮಾಡಿದ್ದ ಸುರೇಶ್ ಕುಮಾರ್​ಗೆ ಕಳೆದ ನಾಲ್ಕು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದೆ. ಅಪರೂಪದ ಮ್ಯೂಟೆಂಟ್ ಚಿಕನ್ ಗುನ್ಯಾ ಎಂದು ಹೇಳಲಾಗುತ್ತಿದೆ. ಅಲ್ಲದೇ ಬ್ರೈನ್ ಮತ್ತು ಸ್ಪೈನಲ್ ಕಾರ್ಡ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಇದರಿಂದ ಸುರೇಶ್ ಕುಮಾರ್ ಮಾತನಾಡಲಾಗದೆ ತೀವ್ರ ಸುಸ್ತಾಗಿದ್ದಾರೆ.

ಅಪರೂಪದ ಮ್ಯೂಟೆಂಟ್ ಚಿಕನ್ ಗುನ್ಯಾದಿಂದ ಬಳಲುತ್ತಿರುವ ಸುರೇಶ್ ಕುಮಾರ್​​ಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದ್ದು, ನಾಲ್ಕುವರೆ ಲಕ್ಷ ರೂಪಾಯಿಯ ನಾಲ್ಕು ಇಂಜೆಕ್ಷನ್ ನೀಡಲಾಗಿದೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here