ಬೆಂಗಳೂರು:- ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಉಗ್ರ ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದ ಎಂಬ ಹೇಳಿಕೆ ಕುರಿತು ಶೋಭಾ ಕರಂದ್ಲಾಜೆ ಅವರು ಹೈಕೋರ್ಟ್ನಲ್ಲಿ ಕ್ಷಮೆ ಕೇಳಿದ್ದಾರೆ.
ಈ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಅದರ ವಿಚಾರಣೆ ಸೆಪ್ಟೆಂಬರ್ 3 ರಂದು ನಡೆಯಿತು. ಶೋಭಾ ಪರ ವಾದ ಮಂಡಿಸಿದ ವಕೀಲರು, ಸಚಿವರ ಹೇಳಿಕೆಗೆ ಸಂಬಂಧಿಸಿ ತಮಿಳುನಾಡು ಜನರ ಕ್ಷಮೆಯಾಚಿಸುವುದಾಗಿ ಅಫಿಡವಿಟ್ ಸಲ್ಲಿಸಲಾಗಿದೆ.
ತಮಿಳುನಾಡಿನ ಮುಖ್ಯ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರದಿಂದ ಸೂಕ್ತ ಸೂಚನೆ ಪಡೆದ ನಂತರ ತಿಳಿಸುವೆ ಎಂದು ಹೇಳಿದ್ದಾರೆ.
ತಮಿಳುನಾಡಿನ ಇತಿಹಾಸ, ಶ್ರೀಮಂತ ಸಂಸ್ಕೃತಿ, ಸಂಪ್ರದಾಯ ಮತ್ತು ಜನರ ಬಗ್ಗೆ ನನಗೆ ಹೆಚ್ಚಿನ ಗೌರವ ಇದೆ. ತಮಿಳುನಾಡಿನ ಜನರ ಭಾವನೆಗಳನ್ನು ನೋಯಿಸುವ ಯಾವುದೇ ಉದ್ದೇಶ ನನ್ನದಾಗಿರಲಿಲ್ಲ. ಆದ್ದರಿಂದ, ನನ್ನ ಹೇಳಿಕೆಯಿಂದ ಯಾವುದೇ ನೋವನ್ನು ಉಂಟು ಮಾಡಿದ್ದಕ್ಕಾಗಿ ನಾನು ಮತ್ತೊಮ್ಮೆ ತಮಿಳುನಾಡಿನ ಜನತೆಗೆ ಕ್ಷಮೆಯಾಚಿಸುತ್ತೇನೆ. ನ್ಯಾಯದ ಹಿತಾಸಕ್ತಿಯಿಂದ ಈ ಹೇಳಿಕೆ ನೀಡಿದ್ದೇನೆ, ಹಾಗಂತ ಉದ್ದೇಶಿತವಲ್ಲ ಎಂದು ಹೇಳಿದ್ದಾರೆ.