ಬೆಂಗಳೂರು: ಪ್ರೇಯಸಿಗಾಗಿ ಖದೀಮನಾದ ಪ್ರಿಯಕರ ಕಳ್ಳತನ ಮಾಡಿ ಇದೀಗ ಪೊಲೀಸರಿಗೆ ಲಾಕ್ ಆಗಿದ್ದಾನೆ. ಸರ್ಜಾಪುರದ ಚಿಕ್ಕದಾಸರಹಳ್ಳಿ ವಾಸಿ ಲಕ್ಷ್ಮಣ್@ಗುನ್ನಿ ಬಂಧಿತ ಆರೋಪಿಯಾಗಿದ್ದು, ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಜಿಗಣಿ ಪೊಲೀಸರು ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯಿಂದ 8 ಲಕ್ಷ ಮೌಲ್ಯದ 101 ಗ್ರಾಂ ಚಿನ್ನಾಭರಣ ಜಫ್ತಿ ಮಾಡಲಾಗಿದ್ದು, ಕೈಯಲ್ಲಿ ಕೆಲಸವಿಲ್ಲದಿದ್ದರು ಶೋಕಿ ಜೀವನ ರೂಡಿಸಿಕೊಂಡಿದ್ದ ಆರೋಪಿ ಪ್ರೇಯಸಿಯನ್ನು ಪ್ರವಾಸಿ ತಾಣಗಳಿಗೆ ಸುತ್ತಾಡಿಸಲು ಮನೆಗಳಿಗೆ ಕನ್ನ ಹಾಕುತ್ತಿದ್ದನು.
ಜಿಗಣಿಯ ಗೋಪಾಲಸ್ವಾಮಿ ಎಂಬುವವರ ಮನೆಗೆ ಬೆಳ್ಳಂಬೆಳಗ್ಗೆ ಕಳ್ಳತನ ಮಾಡಿದ್ದನು. ಬಾಗಿಲು ಮುರಿದು ನಗನಾಣ್ಯ ದೋಚಿ ಪರಾರಿಯಾಗಿದ್ದ ಆರೋಪಿ ವಿರುದ್ಧ ಜಿಗಣಿ, ಬನ್ನೇರುಘಟ್ಟ, ಅತ್ತಿಬೆಲೆ, ಸೂರ್ಯನಗರ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕೇಸ್ ದಾಖಲಾಗಿತ್ತು. 23 ಮನೆಗಳವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.