ಗಣೇಶ ಹಬ್ಬಕ್ಕೆ ಊರಿನತ್ತ ಹೊರಟ ಜನ: ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್ ಜಾಮ್!

0
Spread the love

ಬೆಂಗಳೂರು:- ಗಣೇಶ ಹಬ್ಬಕ್ಕೆ ಸಾಲು ಸಾಲು ರಜೆ ಇರುವ ಹಿನ್ನೆಲೆ, ಬೆಂಗಳೂರಿನಲ್ಲಿ ನೆಲೆಸಿರುವ ಜನ ತಮ್ಮ-ತಮ್ಮ ಊರುಗಳಿಗೆ ಹೊರಟಿದ್ದಾರೆ. ಹೀಗಾಗಿ ನಗರದ ಹಲವೆಡೆ ಟ್ರಾಫಿಕ್​ ಜಾಮ್​ ಉಂಟಾಗಿದೆ.

Advertisement

ಕೆ.ಆರ್.ಪುರಂನ ಐಟಿಐ ಗೇಟ್, ಆನಂದ್ ರಾವ್ ಸರ್ಕಲ್​ನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು, ಸವಾರರು ಪರದಾಡಿದ್ದಾರೆ.

ಹೂಡಿ ಸರ್ಕಲ್ ಹತ್ತಿರ ಅಯ್ಯಪ್ಪ ನಗರ ರಸ್ತೆಯಲ್ಲಿ ಜನಸಂದಣಿ ಹೆಚ್ಚಾಗಿರುವ ಕಾರಣ ಅಯ್ಯಪ್ಪ ನಗರದ ಕಡೆಗೆ ಹಾಗೂ ಐಟಿಪಿಎಲ್ ಮುಖ್ಯ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು ವಾಹನಗಳ ದಟ್ಟಣೆಯನ್ನು ಶೀಘ್ರದಲ್ಲೇ ತೆರವುಗೊಳಿಸಲಾಗುವುದು ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಜನರು ತಮ್ಮ ಊರುಗಳಿಗೆ ತೆರಳುತ್ತಿದ್ದು ಹಾಗೂ KSRTC ವತಿಯಿಂದ ಹೆಚ್ಚುವರಿಯಾಗಿ ಬಸ್ ಬಿಟ್ಟಿರುವ ಹಿನ್ನೆಲೆ ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ದಟ್ಟಣೆಯಾಗುವ ಕಾರಣ ಸಾರ್ವಜನಿಕರು ಬದಲಿ ರಸ್ತೆ ಮೂಲಕ ಸಂಚರಿಸುವಂತೆ ಉಪ್ಪಾರಪೇಟೆ ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಅದೇ ರೀತಿಯಾಗಿ ವರ್ತೂರು ಗುಂಜೂರು ರಸ್ತೆಯಲ್ಲಿ ಹಬ್ಬ ಹಿನ್ನಲೆ ಶಾಪಿಂಗ್‌ನಿಂದಾಗಿ ನಿಧಾನಗತಿಯ ಸಂಚಾರವಿದ್ದು, ದಯಮಾಡಿ ಸಹಕರಿಸುವಂತೆ ತಿಳಿಸಲಾಗಿದೆ.

ರಾತ್ರಿಯಾಗುತ್ತಿದ್ದಂತೆ​ ಕೆಎಸ್ಆರ್​ಟಿಸಿಯತ್ತ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುತ್ತಿದೆ. ತಮ್ಮ ತಮ್ಮ ಊರುಗಳಿಗೆ ಹೋಗಲು ಸಾವಿರಾರು ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸುತ್ತಿದ್ದಾರೆ. ಮೆಜೆಸ್ಟಿಕ್​ನ ಕೆಎಸ್​ಆರ್​ಟಿಸಿ ಟರ್ಮಿನಲ್-1ರಲ್ಲಿ ಜನಜಂಗುಳಿ ಉಂಟಾಗಿದೆ.


Spread the love

LEAVE A REPLY

Please enter your comment!
Please enter your name here