ಚಿಕ್ಕೋಡಿ: ಎರಡು ಗಣಪತಿ ಮಂಡಳಿ ಯುವಕರ ನಡುವೆ ಕಿತ್ತಾಟ!

0
Spread the love

ಬೆಳಗಾವಿ:- ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆಯಾಗಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಜರುಗಿದೆ.

Advertisement

ಮೆರವಣಿಗೆ ಮೂಲಕ ಯುವಕರು ಗಣಪತಿ ಪ್ರತಿಷ್ಠಾಪನೆಗೆ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಗ್ರಾಮದ ಬಸ್ ನಿಲ್ದಾಣದ ಬಳಿ ಪಟಾಕಿ ಹೊಡೆಯುವ ವಿಚಾರಕ್ಕೆ ವಾಗ್ವಾದ ನಡೆದಿದೆ.

ನೋಡ ನೋಡುತ್ತಿದ್ದಂತೆ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಪರಸ್ಪರ ಯುವಕರು ಹೊಡೆದಾಡಿಕೊಂಡಿದ್ದಾರೆ. ಬಳಿಕ ಗ್ರಾಮದ ಮುಖಂಡರು ಹುಡುಗರ ಗಲಾಟೆ ಬಿಡಿಸಿ ಬುದ್ಧಿವಾದ ಹೇಳಿದ್ದಾರೆ.

ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here