ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದ ಸರ್ಕಾರಿ ಬಸ್! ಬಾಲಕ ಸಾವು

0
Spread the love

ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಭೀಕರ ಅಪಘಾತ ಸಂಭವಿಸಿದೆ.  ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ವಾಯುವ್ಯ ಕರ್ನಾಟಕ ಸಾರಿಗೆ ಬಸ್​​ ಹರಿದು ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಸುನೀಲ್ ಬಂಡರಗರ್ (10 ವರ್ಷ) ಮೃತ ದುರ್ದೈವಿಯಾಗಿದ್ದು,

Advertisement

ಸಿಸಿಟಿವಿಯಲ್ಲಿ ಅಪಘಾತದ ಭೀಕರ ದೃಶ್ಯ ಸೆರೆಯಾಗಿದೆ. ಸುನೀಲ್​ ಬಂಡರಗರ್​​ ಅಥಣಿ ಪಟ್ಟಣದಲ್ಲಿನ ಗಲಗಲಿ ಆಸ್ಪತ್ರೆ ಬಳಿಯ ಟ್ಯೂಷನ್​ಗೆ ಬಂದಿದ್ದನು. ಟ್ಯೂಷನ್ ಮುಗಿಸಿ ಮೂತ್ರ ವಿಸರ್ಜನೆಗೆಯಂದು ಸುನೀಲ್​ ಬಂಡರಗರ್ ಗೆಳೆಯರ ಜೊತೆ ರಸ್ತೆ ಬದಿ ನಿಂತಿದ್ದನು.

ಈ ವೇಳೆ ಅಥಣಿಯಿಂದ ಕಾರವಾರಕ್ಕೆ ಹೊರಟಿದ್ದ ಸರ್ಕಾರಿ ಬಸ್ ಹುಡುಗರ ಮೇಲೆ ಬರುತ್ತಿತ್ತು. ಇದನ್ನು ಗಮನಿಸಿದ ಸುನೀಲ್​ ಬಂಡರಗರ್ ಗೆಳೆಯರು ಹಿಂದಕ್ಕೆ ಸರಿದಿದ್ದಾರೆ. ಆದರೆ, ಸುನೀಲ್​ ಬಂಡರಗರ್ ಹಿಂದೆ ಸರೆಯುವಷ್ಟರಲ್ಲಿ ಬಸ್​ ಹರಿದಿದೆ. ಚಾಲಕನ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 


Spread the love

LEAVE A REPLY

Please enter your comment!
Please enter your name here