ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ!

0
Spread the love

ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕಷ್ಟು ಅಪ್ಡೇಟ್​ಗಳು ಬರುತ್ತಲೇ ಇವೆ. ನಟ ದರ್ಶನ್, ಪವಿತ್ರಾ ಗೌಡ ಹಾಗೂ ಡಿ ಗ್ಯಾಂಗ್ ಸೇರಿಕೊಂಡಿರುವ ಈ ಒಂದು ಪ್ರಕರಣದಲ್ಲಿ ಚಾರ್ಜ್ ಶೀಟ್ ಕೂಡಾ ಸಲ್ಲಿಕೆಯಾಗಿದೆ. ಇಂದಿಗೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಮತ್ತು ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್‌ ಆದೇಶ ಹೊರಡಿಸಿದೆ.

Advertisement

ಸೆ.12ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ಮಧ್ಯಾಹ್ನ 1:15ಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ 17 ಆರೋಪಿಗಳು ಕೂಡ ವಿಚಾರಣೆ ಹಾಜರಾಗಿದ್ದರು. ಬಳ್ಳಾರಿ ಜೈಲಿನಿಂದ ವೀಡಿಯೋ ಕಾನ್ಫರೆನ್ಸ್‌ಗೆ ಆರೋಪಿ ದರ್ಶನ್ ಬಂದಿದ್ದರು. ಪ್ರಕರಣದ ಹಾರ್ಡ್ಡಿಸ್ಕ್, ಪೆನ್‌ಡ್ರೈವ್ ಎಲ್ಲವನ್ನೂ ಕೋರ್ಟ್‌ಗೆ ಎಸ್‌ಪಿಸಿ ಪ್ರಸನ್ನಕುಮಾರ್ ಸಲ್ಲಿಕೆ ಮಾಡಿದರು.

ಡಿಜಿಟಲ್ ಎವಿಡೆನ್ಸ್ 2 ವಾರದಲ್ಲಿ ಕೊಡುವುದಾಗಿ ತಿಳಿಸಿದರು. ವಿಚಾರಣೆ ವೇಳೆ, ಜೈಲಿಗೆ ಚಾರ್ಜ್‌ಶೀಟ್‌ ಕಳಿಸುತ್ತೇವೆ ಎಂದು ಎಸ್‌ಪಿಸಿ ಪ್ರಸನ್ನಕುಮಾರ್ ಕೋರ್ಟ್‌ಗೆ ಮನವಿ ಮಾಡಿದರು. ಆದರೆ ಆರೋಪಿಗಳ ಪರ ವಕೀಲರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ನ್ಯಾಯಾಧೀಶರು ಆರೋಪಿಗಳ ಬಳಿಯೇ ವಕೀಲರ ಹೆಸರು ಕೇಳಿದರು. ಸಿ.ವಿ.ನಾಗೇಶ್ ನನ್ನ ಪರ ಹಾಜರಾಗ್ತಾ ಇದ್ದಾರೆ ಎಂದು ದರ್ಶನ್ ತಿಳಿಸಿದರು. ಉಳಿದ ಆರೋಪಿಗಳು ತಮ್ಮ ಪರ ವಾದ ಮಂಡಿಸುವ ವಕೀಲರ ಹೆಸರು ಹೇಳಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಮತ್ತೆ ಮೂರು ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿತು.


Spread the love

LEAVE A REPLY

Please enter your comment!
Please enter your name here