ರೋಣ ತಾಲೂಕಿನ ಮಾರನಬಸರಿ ಗ್ರಾಮದ ಮಹಾದಾಸೋಹಿ ಶ್ರೀ ಶರಣಬಸವೇಶ್ವರ ಜಾತ್ರಾಮಹೋತ್ಸವ ಅದ್ದೂರಿಯಿಂದ ಜರುಗಿತು. ಜಾತ್ರೆಯ ನಿಮಿತ್ತ ಜರುಗಿದ ರಥೋತ್ಸವ ಕಾರ್ಯಕ್ರದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ರಥಕ್ಕೆ ಹೂ, ಹಣ್ಣು, ಉತ್ತತ್ತಿಗಳನ್ನು ಎಸೆದು ತಮ್ಮ ಇಷ್ಟಾರ್ಥಗಳನ್ನು ಈಡೆರಿಸುವಂತೆ ತ್ರಿವಿಧ ದಾಸೋಹಿ ಶರಣಬಸವೇಶ್ವರನಲ್ಲಿ ಬೇಡಿಕೊಂಡರು.