ಜೈಲಲ್ಲಿದ್ದರೂ ಕರಗದ ಕೊಬ್ಬು: ಮಿಡಲ್ ಫಿಂಗರ್ ತೋರಿಸಿದ ದರ್ಶನ್!

0
Spread the love

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಆತನ ಪ್ರೇಯಸಿ ಪವಿತ್ರಾ ಗೌಡ ಇನ್ನಿತರರು ಬಂಧನವಾಗಿ ಮೂರು ತಿಂಗಳಾಗಿವೆ. ಪೊಲೀಸರು ಬಂಧಿಸಿದ ಆರಂಭದಲ್ಲಿ ನಕಲಿ ಪಶ್ಚಾತ್ತಾಪ ತೋರ್ಪಡಿಸಿದ್ದ ದರ್ಶನ್ ಈಗ ತಮ್ಮ ನಿಜ ವ್ಯಕ್ತಿತ್ವ ಪ್ರದರ್ಶಿಸುತ್ತಿದ್ದಾರೆ. ಹೌದು ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ದರ್ಶನ್‌ನನ್ನು ಭೇಟಿ ಮಾಡಲು ಬಂದ ವಕೀಲರನ್ನು ಭೇಟಿಯಾಗಲು ಹೈಸೆಕ್ಯೂರಿಟಿ ಜೈಲಿನಿಂದ ಹೊರಗೆ ಬರುವಾಗ ಮಾಧ್ಯಮಗಳ ಕ್ಯಾಮೆರಾಗಳನ್ನು ನೋಡಿ ಕೈಗಳ ಮಧ್ಯದ ಬೆರಳನ್ನು ತೋರಿಸಿ ಅಸಭ್ಯವಾಗಿ ವರ್ತಿಸುವುದು ಕಂಡುಬಂದಿದೆ.

Advertisement

ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ನಟ ದರ್ಶನ್ ಕೆಲವು ದಿನಗಳ ಹಿಂದೆ ಮಾಧ್ಯಮಗಳಲ್ಲಿ ಏನೆಲ್ಲಾ ವರದಿಗಳು ಪ್ರಸಾರ ಆಗುತ್ತಿವೆ ಎಂಬುದನ್ನು ನೋಡಲು ಟಿವಿಯನ್ನು ತರಿಸಿಕೊಂಡಿದ್ದಾರೆ. ಆದರೆ, ತಮ್ಮ ವಿರುದ್ಧ ಮಾಧ್ಯಮಗಳು ವರದಿ ಮಾಡುತ್ತಿರುವುದನ್ನು ಕಂಡು ಪುನಃ ಕೆರಳಿದಂತಾಗಿದ್ದಾರೆ.

ಇನ್ನು ಗುರುವಾರ ಬೆಳಗ್ಗೆ ಆತನ ಪತ್ನಿ ವಿಜಯಲಕ್ಷ್ಮಿ ಬಂದಾಗ ಫುಲ್ ಸಾಫ್ಟ್ ಆಗಿ ನಡೆದುಕೊಂಡಿದ್ದರು. ಆದರೆ, ಮಧ್ಯಾಹ್ನದ ವೇಲೆ ವಕೀಲರು ಭೇಟಿ ಮಾಡಲು ಬಂದಾಗ, ಹೈ ಸೆಕ್ಯೂರಿಟಿ ಜೈಲಿನಿಂದ ಸಂದರ್ಶಕರ ಕೊಠಡಿಗೆ ಬರುವಾಗ ಮಾಧ್ಯಮಗಳ ಕ್ಯಾಮೆರಾಗಳನ್ನು ನೋಡಿ, ಮಿಡಲ್ ಫಿಂಗರ್ ತೋರಿಸಿ ಅಸಭ್ಯ ವರ್ತನೆ ತೋರಿದ್ದಾರೆ ಎಂದು ತಿಳಿದುಬಂದಿದೆ.


Spread the love

LEAVE A REPLY

Please enter your comment!
Please enter your name here