ವಿಜಯಸಾಕ್ಷಿ ಸುದ್ದಿ, ಗದಗ : ಗದಗ-ಬೆಟಗೇರಿ ನಗರಸಭೆಯಲ್ಲಿ ಗಣೇಶೋತ್ಸವದ ಅಂಗವಾಗಿ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಕಲ್ಲಯ್ಯಜ್ಜನವರ ಸಾನ್ನಿಧ್ಯದಲ್ಲಿ ಪೂಜೆ ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ನಗರಸಭೆ ಪೌರಾಯುಕ್ತರು, ಮಾಜಿ ಅಧ್ಯಕ್ಷರು ಮತ್ತು ಹಾಲಿ ಸದಸ್ಯರು, ನಗರಸಭೆ ಕಚೇರಿ ವ್ಯವಸ್ಥಾಪಕರು, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ನಗರಸಭೆ, ಲೇಖಾಧೀಕ್ಷಕರು, ಕಂದಾಯ ಅಧಿಕಾರಿಗಳು, ಲೆಕ್ಕಾಧೀಕ್ಷಕ ಟಿ.ಎಚ್. ದ್ಯಾವನೂರ, ಕಛೇರಿ ವ್ಯವಸ್ಥಾಪಕ ಪಿ.ಎಫ್. ಶೇರಖಾನೆ, ಎಸ್.ಎಂ. ಗುಡಿ, ಎಲ್.ಜಿ. ಗಾಡಗೋಳಿ, ಎನ್.ಎಂ. ಗೋರಣ್ಣವರ, ಎಸ್.ಎ. ಅಗಸಿಮನಿ, ಆರ್.ಎಂ. ನಾಗಲೀಕರ ಸೇರಿದಂತೆ ನಗರಸಭೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Advertisement