ಸಿದ್ದರಾಮಯ್ಯ ಅವರು ಹಿಟ್ಲರ್ ಆಗಿದ್ದಾರೆ: ಸಚಿವೆ ಶೋಭಾ ಕರಂದ್ಲಾಜೆ

0
Spread the love

ಬೆಂಗಳೂರು: ಸರ್ಕಾರ ದ್ವೇಷದ ರಾಜಕೀಯ ಮಾಡುವುದು ಬೇಡ, ಎಫ್‌ಐಆರ್ ಹಾಕಿದೆ, ನಾವು ಎದುರಿಸ್ತೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಾಗಮಂಗಲ ಗಲಭೆ ವಿಚಾರವಾಗಿ ನನ್ನ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಸರ್ಕಾರ ದ್ವೇಷದ ರಾಜಕೀಯ ಮಾಡುವುದು ಬೇಡ, ಎಫ್‌ಐಆರ್ ಹಾಕಿದೆ, ನಾವು ಎದುರಿಸ್ತೇವೆ.

Advertisement

ಪೊಲೀಸರು ನಮ್ಮನ್ನು ಬಂಧಿಸಬಹುದು, ನಾವು ಬಂಧನಕ್ಕೆ ಒಳಗಾಗ್ತೇವೆ. ನಾವು ಹೋರಾಟ ಮಾಡಿಕೊಂಡು ಬಂದವರು, ಹೋರಾಟ ಮುಂದುವರಿಸ್ತೀವಿ ಎಂದಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸುವ ಕೆಲಸ ನಿರಂತರವಾಗಿ ನಡೀತಾ ಇದೆ. ಸಿದ್ದರಾಮಯ್ಯ ಅವರು ಹಿಟ್ಲರ್ ಆಗಿದ್ದಾರೆ. ಬಿಜೆಪಿ ನಾಯಕರು, ಕಾರ್ಯಕರ್ತರ ಧ್ವನಿ ಅಡಗಿಸುವ, ಹತ್ತಿಕ್ಕುವ ಕೆಲಸ ಮಾಡ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

 


Spread the love

LEAVE A REPLY

Please enter your comment!
Please enter your name here