ಶ್ರೀರಂಗಪಟ್ಟಣ ದಸರಾ ಮಹೋತ್ಸವ: ಲೋಗೋ ಬಿಡುಗಡೆ ಮಾಡಿದ ಕೃಷಿ ಸಚಿವ

0
Spread the love

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ದಸರಾ ಮಹೋತ್ಸವ-2024 ಸಂಬಂಧಿಸಿದಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಲೋಗೋ ಬಿಡುಗಡೆ ಮಾಡಿದರು. ಹೌದು ಅವರು ಇಂದು ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆದ ಶ್ರೀರಂಗಪಟ್ಟಣ ದಸರಾ ಮಹೋತ್ಸವ-2024ರ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.

Advertisement

ನಾಡಿನ ದಸರಾ ಹಬ್ಬವು ಇಡೀ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿ ಪಡೆದಿದ್ದು, ನಮ್ಮ ನಾಡಿನ ಕಲ್ಯಾಣಕ್ಕೋಸ್ಕರ ಶ್ರೀ ಚಾಮುಂಡೇಶ್ವರಿ ತಾಯಿಯನ್ನು ಪೂಜಿಸಲಾಗುವುದು.  ಶ್ರೀರಂಗಪಟ್ಟಣ ದಸರಾ ಹಬ್ಬದಲ್ಲಿ ಅನೇಕ ರೀತಿಯ ವಿಭಿನ್ನ ಸಾಂಸ್ಕೃತಿಕ ಉತ್ಸವಗಳು ನಡೆಯಲಿದ್ದು,

ಸಾರ್ವಜನಿಕರಿಗೆ ಹಬ್ಬದ ವಾತಾವರಣವು ಉಂಟಾಗಲಿದೆ ಎಂದರು. ಶ್ರೀರಂಗಪಟ್ಟಣ ದಸರಾ ಹಬ್ಬದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮಂಡ್ಯ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಬೇಕು. ಜೊತೆಗೆ ನಮ್ಮ ನಾಡಿನ ಪರಂಪರೆಯನ್ನು ಉಳಿಸುವ ಕೆಲಸವಾಗಬೇಕು ಎಂದು ತಿಳಿಸಿದರು.

 


Spread the love

LEAVE A REPLY

Please enter your comment!
Please enter your name here