ವಿಷಯ ಡೈವರ್ಟ್ ಮಾಡಲು ವಿಪಕ್ಷ ನಾಯಕರನ್ನ ಟಾರ್ಗೆಟ್ ಮಾಡಿದ್ದಾರೆ: ಬಿವೈ ವಿಜಯೇಂದ್ರ

0
Spread the love

ಮಂಡ್ಯ: ವಿಷಯ ಡೈವರ್ಟ್ ಮಾಡಲು ವಿಪಕ್ಷ ನಾಯಕರನ್ನ ಟಾರ್ಗೆಟ್ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಅಭದ್ರತೆ ಕಾಡುತ್ತಿದೆ. ಮುಡಾ ಹಗರಣ, ವಾಲ್ಮೀಕಿ ಹಗರಣ ಆಗಿದೆ. ಸರ್ಕಾರದ ಮೇಲೆ ಭ್ರಷ್ಟಾಚಾರ ಆರೋಪಗಳು ಕೇಳಿಬರ್ತಿವೆ.

Advertisement

ಭ್ರಷ್ಟಾಚಾರ ಮುಕ್ತ ಆಡಳಿತ ಕೊಡಲು ಈ ಸರ್ಕಾರ ವಿಫಲವಾಗಿದೆ. ರಾಜ್ಯದ ಜನರಿಗೆ ಗೊತ್ತಿದೆ. ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ತಮ್ಮ ತಪ್ಪುಗಳನ್ನ ಮುಚ್ಚಿಕೊಳ್ಳಲು, ವಿಷಯ ಡೈವರ್ಟ್ ಮಾಡಲು ವಿಪಕ್ಷ ನಾಯಕರನ್ನ ಟಾರ್ಗೆಟ್ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಸಮಾಜ ವಿರೋಧಿ ಚಟುವಟಿಕೆಗಳಿಗೆ ಬೆಂಬಲ ಕೊಡ್ತಿದ್ದಾರೆ ಎಂದರು.

 


Spread the love

LEAVE A REPLY

Please enter your comment!
Please enter your name here