ರಾಮನಗರ:- ಕನಕಪುರ ತಾಲೂಕಿನ ದೊಡ್ಡಮುದವಾಡಿ ಗ್ರಾಮದ ಬಳಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಯುವಕ ದುರ್ಮರಣ ಹೊಂದಿದ ಘಟನೆ ಜರುಗಿದೆ.
Advertisement
ನಿದ್ರೆ ಮಂಪರಿನಲ್ಲಿದ್ದ ಕಾರು ಚಾಲಕ ನಿಯಂತ್ರಣ ಕಳೆದುಕೊಂಡು ಮರಕ್ಕೆ ಗುದ್ದಿದ್ದಾನೆ. ಡಿಕ್ಕಿಯಾಗಿರುವ ರಭಸಕ್ಕೆ ವಿನಯ್ ಎಂಬ ಯುವಕ ಸ್ಥಳದಲ್ಲೇ ಮೃತ ಪಟ್ಟಿದ್ದು, ಅನಿಕೇತ್ ಎಂಬವನಿಗೆ ಗಂಭೀರ ಗಾಯವಾಗಿದೆ.
ಕಾರಿನಲ್ಲಿದ್ದವರು ಬೆಂಗಳೂರಿನ ಇಟ್ಟಮಡು ನಿವಾಸಿಗಳಾಗಿದ್ದು, ವೀಕೆಂಡ್ ಹಿನ್ನೆಲೆ ರೆಸಾರ್ಟ್ಗೆ ಬಂದಿದ್ದರು. ಹಿಂತಿರುಗಿ ಹೋಗುವಾಗ ಅಪಘಾತ ಸಂಭವಿಸಿದೆ. ಸ್ಥಳೀಯರು ಗಾಯಾಳುವನ್ನ ಹಾರೋಹಳ್ಳಿಯ ದಯಾನಂದ ಸಾಗರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಕನಕಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.