ಗೋರಕ್ಷಣೆಗೆ ಅವತರಿಸಿದ ಶ್ರೀನಿವಾಸನಿಗೆ ಹಸುವಿನ ಕೊಬ್ಬಿನ ಪ್ರಸಾದ ನೀಡಿದ್ದೀರಿ: ಪೇಜಾವರ ಶ್ರೀ ಕಿಡಿ!

0
Spread the love

ಉಡುಪಿ:- ಗೋರಕ್ಷಣೆಗೆ ಅವತರಿಸಿದ ಶ್ರೀನಿವಾಸನಿಗೆ ಹಸುವಿನ ಕೊಬ್ಬಿನ ಪ್ರಸಾದ ನೀಡಿದ್ದೀರಿ ಎಂದು ಹೇಳುವ ಮೂಲಕ ಪೇಜಾವರ ಶ್ರೀ ಕಿಡಿಕಾರಿದ್ದಾರೆ.

Advertisement

ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ ಬಳಕೆ ಆರೋಪ ಕೇಳಿಬಂದಿರುವ ವಿಚಾರವಾಗಿ ಮಾತನಾಡಿ, ತಿರುಪತಿಯ ಶ್ರೀನಿವಾಸ ದೇವರು ಗೋರಕ್ಷಣೆಗೆ ಅವತರಿಸಿದವರು. ಅಂತಹ ಶ್ರೀನಿವಾಸ ದೇವರಿಗೆ ಹಸುವಿನ ಕೊಬ್ಬಿನ ಪ್ರಸಾದ ನೀಡಿದ್ದೀರಿ ಎಂದು ಕಿಡಿಕಾರಿದ್ದಾರೆ. ಲಡ್ಡು ಪ್ರಸಾದಕ್ಕೆ ಹಸುವಿನ ತುಪ್ಪದ ಬದಲು ಕೃತಕ ತುಪ್ಪ ಹಾಕಿದ್ದಾರೆ. ಮೀನಿನ ಎಣ್ಣೆ, ಹಂದಿಯ ಕೊಬ್ಬು, ಹಸುವಿನ ಕೊಬ್ಬು ಮಿಶ್ರಣದಿಂದ ಲಡ್ಡು ಪ್ರಸಾದ ತಯಾರಿಸಿದ್ದಾರೆ. ಇದು ಸನಾತನ ಹಿಂದೂ ಸಮಾಜಕ್ಕೆ ಬಗೆದಿರುವ ದೊಡ್ಡ ಅಪಚಾರ. ಆಂಧ್ರದ ಹಿಂದಿನ ಸರ್ಕಾರ ಈ ಕೃತ್ಯ ನಡೆಸಿರುವುದು ಖಂಡನಾರ್ಹ. ಇದು ದೇವರಿಗೆ ಬಗೆದಿರುವ ಅಪಚಾರ ಎಂದು ವಾಗ್ದಾಳಿ ಮಾಡಿದ್ದಾರೆ.

ಇದೊಂದು ಅಪರಾಧ, ಹಿಂದೂಗಳ ಧಾರ್ಮಿಕ ಶ್ರದ್ಧೆಯ ಮೇಲಿನ ಹಲ್ಲೆ. ಉಪಯೋಗಕ್ಕೆ ಅನರ್ಹವಾದ ತುಪ್ಪವನ್ನ ದೇವಾಲಯಕ್ಕೆ ಬಳಸಿದ್ದೀರಿ. ಧಾರ್ಮಿಕ ಶ್ರದ್ಧಾ ಕೇಂದ್ರಗಳು ಸರ್ಕಾರದ ಹಿಡಿತದಲ್ಲಿ ಇರಬಾರದು. ಬದಲಿಗೆ ಶ್ರದ್ಧಾ ಕೇಂದ್ರಗಳು ಹಿಂದೂ ಸಮಾಜದ ಕೈಯಲ್ಲಿರಬೇಕು. ಸುಪ್ರೀಂಕೋರ್ಟ್​​ ತೀರ್ಪು ನೀಡಿದೆ. ತಡ ಮಾಡದೆ ಸರ್ಕಾರದ ಸ್ವಾಧೀನದಿಂದ ಶ್ರದ್ಧಾ ಕೇಂದ್ರ ಮುಕ್ತಗೊಳಿಸಿ. ತಿರುಪತಿ ದೇವಾಲಯದ ಆಡಳಿತವನ್ನು ಹಿಂದೂಗಳ ಸಂಸ್ಥೆಗೆ ನೀಡಿ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here