ಪ್ರಾಸಿಕ್ಯೂಷನ್ ವಿರುದ್ಧ CM ನಾಳೆಯೇ ಮೇಲ್ಮನವಿ ಸಾಧ್ಯತೆ: FIR ದಾಖಲಾದ್ರೆ ರಾಜೀನಾಮೆ ಅನಿವಾರ್ಯ..!?

0
Spread the love

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಸಿದ್ದರಾಮಯ್ಯ ಅವರ ವಿರುದ್ಧ ಬಂಧಿರುವುದರಿಂದ ರಾಜ್ಯರಾಜಕೀಯದಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ.

Advertisement

ಹೈ ತೀರ್ಪನ್ನು ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಮತ್ತೊಂದು ಸುತ್ತಿನ ಹೋರಾಟವನ್ನು ಹಮ್ಮಿಕೊಳ್ಳಲಿದೆ. ಬೆಂಗಳೂರು ಟು ಮೈಸೂರು ಪಾದಯಾತ್ರೆ ಮಾದರಿಯಲ್ಲಿ ಮತ್ತೊಂದು ಸುತ್ತಿನ ಹೋರಾಟವನ್ನು ಹಮ್ಮಿಕೊಳ್ಳುವ ಸಾಧ್ಯತೆ ಇದೆ.

ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳು ಒತ್ತಾಯ ಮಾಡಲಿವೆ. ಅಲ್ಲದೆ, ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ಆದಲ್ಲಿ ಇದು ಸಿದ್ದರಾಮಯ್ಯಗೂ ನೈತಿಕವಾಗಿ ಸಿಎಂ ಕುರ್ಚಿಯ ಮೇಲೆ ಕುಳಿತುಕೊಳ್ಳಲು ಸಮಸ್ಯೆ ಸೃಷ್ಟಿಸಲಿದೆ. ಇನ್ನು ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಸುಪ್ರೀಂ ಕೋರ್ಟ್ ಕದತಟ್ಟಲಿದ್ದಾರೆ. ಈಗಾಗಲೇ ಈ ನಿಟ್ಟಿನಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.


Spread the love

LEAVE A REPLY

Please enter your comment!
Please enter your name here