Muda Scam: ಪ್ರಾಸಿಕ್ಯೂಷನ್ ಗೆ ಅನುಮತಿ: ರಾಜೀನಾಮೆ ಕೊಡ್ತಾರಾ CM ಸಿದ್ದರಾಮಯ್ಯ!

0
Spread the love

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ಕೊಡುವ ಬಗ್ಗೆ CM ಸಿದ್ದರಾಮಯ್ಯ ಅವರು, ಕಡ್ಡಿ ಮುರಿದಂತೆ ಮಾತನಾಡಿದ್ದಾರೆ.

Advertisement

ಬೆಂಗಳೂರಿನ ಯಲಹಂಕದಲ್ಲಿ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ ಮಾಡಿ ಬಳಿಕ ಮಾತನಾಡಿದ ಸಿಎಂ, ರಾಜೀನಾಮೆ ಕೊಡುತ್ತಾರೆಂದು ಬಹಳ ಜನ ಕಾಯುತ್ತಿದ್ದಾರೆ. ಆದರೆ, ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಸ್ಪಷ್ಟಪಡಿಸಿದರು.

ನಾನು ರಾಜೀನಾಮೆ ಕೊಡಬೇಕಾ ಎಂದು ಕಾರ್ಯಕ್ರಮದಲ್ಲಿ ನೆರೆದಿದ್ದವರನ್ನು ಕೇಳಿದ ಸಿದ್ದರಾಮಯ್ಯ ನಾನು ರಾಜೀನಾಮೆ ಕೊಡಲ್ಲ, ನಾನು ಫೈಟ್ ಮಾಡುತ್ತೇನೆ ಎಂದರು.

ಇನ್ನೂ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಪ್ರಾಸಿಕ್ಯೂಷನ್‌ಗೆ ನೀಡಿದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಗಳು ವ್ಯಕ್ತವಾಗುತ್ತಿವೆ. ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ನಾಯಕರು ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here