ಎಣ್ಣೆ ಪಾರ್ಟಿ ವೇಳೆ ಸ್ನೇಹಿತರ ಜಗಳ: ಯುವಕನ ಮೇಲೆ ಗುಂಡಿನ ದಾಳಿ !

0
Spread the love

ಕಲಬುರ್ಗಿ:- ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿ ಎಣ್ಣೆ ಪಾರ್ಟಿ ವೇಳೆ ಸ್ನೇಹಿತರ ನಡುವೆ ಜಗಳವಾಗಿದ್ದು ಯುವಕನ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆ ಜರುಗಿದೆಶಾಂತಪ್ಪ ಪೂಜಾರಿ ಎಂಬ ಯುವಕನ ಎಡಗೈಗೆ ಗುಂಡುತಾಕಿ ಗಾಯವಾಗಿದೆ. ರಾತ್ರಿ ಕಡಗಂಚಿ ಗ್ರಾಮದ ಮನೆಯೊಂದರಲ್ಲಿ ಶ್ರೀಕಾಂತ್, ಮಾಳಪ್ಪ, ಕಾಂತಪ್ಪ, ಸೇರಿದಂತೆ ಆರೇಳು ಜನ ಸೇರಿಕೊಂಡು ಎಣ್ಣೆ ಪಾರ್ಟಿ ಮಾಡ್ತಿದ್ದರು.

Advertisement

ಈ ವೇಳೆ ಜಗಳವಾಗಿದ್ದು ಶಾಂತಪ್ಪ ಪೂಜಾರಿ ಎಂಬುವರ ಮೇಲೆ ಗುಂಡಿನ ದಾಳಿಯಾಗಿದೆ. ಅದೃಷ್ಟವಶಾತ್ ಗುಂಡು ಎಡಗೈ ಗೆ ತಾಗಿದ್ದು ಶಾಂತಪ್ಪ ಪ್ರಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಗಾಯಾಳು ಶಾಂತಪ್ಪಗೆ ಕಲಬುರಗಿಯ ಟ್ರಾಮಾ ಕೇರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗುಂಡಿನ ದಾಳಿ ಮಾಡಿದ ಗನ್ ಸಹಿತ ಆರೋಪಿಗಳಾದ ಕಾಂತಪ್ಪ, ಮಾಳಪ್ಪ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here