ಸಿಎಂ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧಕ್ಕೆ ಬೀಗ ಜಡಿಯಲು ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

0
Spread the love

ಬೆಂಗಳೂರು: ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ಹಿನ್ನಲೆ ಸುನಿಲ್ ಕುಮಾರ್, ಅಶ್ವಥ್ ನಾರಾಯಣ್, ಜನಾರ್ದನ ರೆಡ್ಡಿ, ಎನ್ ರವಿ ಕುಮಾರ್ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರನ್ನು ಸೇರಿ ಪ್ರತಿಭಟನಾನಿರತ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ಪ್ಲೆಕಾರ್ಡ್‌ಗಳನ್ನು ಪ್ರದರ್ಶಿಸಿ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದರು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಘೋಷಣೆ ಕೂಗಿದರು. ಈ ವೇಳೆ ವಿಧಾನಸೌಧಕ್ಕೆ ಬೀಗ ಹಾಕಲು ಮುಂದಾದರು. ಆದರೆ ವಿಪಕ್ಷಗಳ ನಾಯಕರ ಯತ್ನವನ್ನು ಪೊಲೀಸರು ವಿಫಲಗೊಳಿಸಿದರು. ಈ ವೇಳೆ ಪ್ರತಿಭಟನಾ ಸ್ಥಳದಲ್ಲಿ ಹೈಡ್ರಾಮಾ ಸೃಷ್ಟಿಸಿದರು.


Spread the love

LEAVE A REPLY

Please enter your comment!
Please enter your name here