ಪಕ್ಷದ ದೃಷ್ಟಿಯಿಂದ ಸಿದ್ದರಾಮಯ್ಯ ರಾಜೀನಾಮೆ ನೀಡಿ ನಿಷ್ಕಳಂಕರಾಗಲಿ: ಕೆಬಿ ಕೋಳಿವಾಡ

0
Spread the love

ಬೆಂಗಳೂರು: ಪಕ್ಷದ ದೃಷ್ಟಿಯಿಂದ ಸಿದ್ದರಾಮಯ್ಯ ರಾಜೀನಾಮೆ ನೀಡಿ ನಿಷ್ಕಳಂಕರಾಗಲಿ ಎಂದು ಮಾಜಿ ಸ್ಪೀಕರ್ ಕೆಬಿ ಕೋಳಿವಾಡ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೇರೆ ಬೇರೆ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಬಿಜೆಪಿಯವರು ಕಾಂಗ್ರೆಸ್​ಗೆ ಮುಜುಗರ ಉಂಟು ಮಾಡಲು ಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ವಿಚಾರದಲ್ಲಿ ಪಕ್ಷಕ್ಕೆ ಮುಜುಗರವುಂಟು ಮಾಡುತ್ತಿದ್ದಾರೆ.

Advertisement

ನನ್ನ 50 ವರ್ಷದ ರಾಜಕೀಯ ಜೀವನದಲ್ಲಿ ಅನೇಕ ಮುಖ್ಯಮಂತ್ರಿಗಳನ್ನು ಕಂಡಿದ್ದೇನೆ. ಆ ಪೈಕಿ ಕಪ್ಪು ಚುಕ್ಕೆ ಇಲ್ಲದೆ ಕೆಲಸ ಮಾಡಿದ ನಂಬರ್ 1 ಸಿಎಂ ಸಿದ್ದರಾಮಯ್ಯ. ಬಿಜೆಪಿ ಈಗ ಪರಿಸ್ಥಿತಿಯ ದುರ್ಬಳಕೆ ಮಾಡುವ ಕೆಲಸ ಮಾಡುತ್ತಿದೆ. ಪಕ್ಷವನ್ನು ಮುಜುಗರಕ್ಕೀಡು ಮಾಡುವ ಕುತಂತ್ರವನ್ನು ಪ್ರಧಾನಿ ಮೋದಿ ಮಾಡುತ್ತಿದ್ದಾರೆ ಎಂದು ಕೋಳಿವಾಡ ಹೇಳಿದ್ದಾರೆ.

ಇನ್ನೂ ಸಿಎಂ ಸಿದ್ದರಾಮಯ್ಯ ಎಷ್ಟೇ ಕಳಂಕ ರಹಿತರಾದರೂ ಪಕ್ಷದ ದೃಷ್ಟಿಯಿಂದ ರಾಜೀನಾಮೆ ನೀಡಲಿ. ನಿಷ್ಕಳಂಕರಾಗಿ ಹೊರಬಂದ ಬಳಿಕ ಮತ್ತೆ ಸಿಎಂ ಆಗಲಿ. ಸಿಎಂ ಸಿದ್ದರಾಮಯ್ಯ ಜೊತೆ ಪಕ್ಷದ 136 ಶಾಸಕರು ಇದ್ದಾರೆ. ಪಕ್ಷದ ದೃಷ್ಟಿಯಿಂದ ರಾಜೀನಾಮೆ ನೀಡಿ ನಿಷ್ಕಳಂಕರಾಗಲಿ ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here