ದೊಡ್ಡಬಳ್ಳಾಪುರ: ತೊಗರಿ ಬೆಳೆ ನಡುವೆ ಗಾಂಜಾ ಬೆಳೆದಿದ್ದ ಆರೋಪಿಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂದಿಸಿದ್ದಾರೆ.
Advertisement
ನಾರಾಯಣಸ್ವಾಮಿ ಬಂಧಿತ ಆರೋಪಿಯಾಗಿದ್ದು, ಗಾಂಜಾ ಮಾರಿ ಹೆಚ್ಚಿನ ಹಣ ಮಾಡಬಹುದು ಅಂತ ತೋಟದಲ್ಲಿ ಗಾಂಜಾ ಬೆಳೆದಿದ್ದನು.
ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ ಸಾಧಿಕ್ ಪಾಷ ದಾಳಿ ನಡೆಸಿ 8 ಕೆಜಿ 700 ಗ್ರಾಂ ತೂಕದ ಗಾಂಜಾ ಗಿಡಗಳು ವಶಕ್ಕೆ ಪಡೆದಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.