Homeculture`ಲಕ್ಷ್ಮೇಶ್ವರದ ಸಾಮ್ರಾಟ'ನಿಗೆ ಸಂಭ್ರಮದ ವಿದಾಯ

`ಲಕ್ಷ್ಮೇಶ್ವರದ ಸಾಮ್ರಾಟ’ನಿಗೆ ಸಂಭ್ರಮದ ವಿದಾಯ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದ ಶ್ರೀ ರಾಘವೇಂದ್ರಸ್ವಾಮಿಗಳ ಮಠದ ಹತ್ತಿರ ಶ್ರೀ ರಾಘವೇಂದ್ರ ಯುವಕ ಮಂಡಳದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಲಕ್ಷ್ಮೇಶ್ವರದ ಸಾಮ್ರಾಟ್ ಗಣೇಶನ ಮೂರ್ತಿಯ ವಿಸರ್ಜನೆ ಕಾರ್ಯಕ್ರಮವು ರವಿವಾರ ಸಡಗರ ಸಂಭ್ರಮದಿಂದ ಜರುಗಿತು. ಪ್ರಸ್ತುತ ವರ್ಷದ ಪ್ರತಿಷ್ಠಾಪನೆ ರಜತಮಹೋತ್ಸವ ಆಚರಿಸಿಕೊಳ್ಳುತ್ತಿದ್ದು, ಸಾವಿರಾರು ಭಕ್ತರು ಉತ್ಸಾಹದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಸಂಜೆಯ ವೇಳೆಗೆ ರಾಘವೇಂದ್ರಸ್ವಾಮಿಗಳ ಮಠದಿಂದ ಪ್ರಾರಂಭವಾದ ಮೆರಣಿಗೆಯು ಅದ್ದೂರಿಯಾಗಿ ಜರುಗಿತು. ಸಾವಿರಾರು ಜನರು ಬೃಹತ್ ಶೋಭಾಯಾತ್ರೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು. ಪಟ್ಟಣದಲ್ಲಿ ಸ್ಥಾಪಿಸಿರುವ ಎಲ್ಲ ಗಣೇಶನ ವಿಗ್ರಹಗಳಲ್ಲಿ ಇದು ಕೊನೆಯ ವಿಸರ್ಜನಾ ಕಾರ್ಯಕ್ರಮವಾಗಿರುವ ಹಿನ್ನೆಲೆಯಲ್ಲಿ ಹಳ್ಳಿಗಳಿಂದ ಸಾವಿರಾರು ಜನರು ಮೆರವಣಿಗೆಯಲ್ಲಿ ಪಾಲ್ಗೊಂಡು ಡಿಜೆ ಸದ್ದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.

ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎನ್.ಬಿ. ಸಂಕದ ಅವರ ಮಾರ್ಗದರ್ಶನದಲ್ಲಿ ಡಿಎಸ್‌ಪಿ ಎ.ಎಚ್. ಇನಾಮದಾರ, ಡಿಎಆರ್ ಡಿಎಸ್‌ಪಿ, ಸಿಪಿಐ ನಾಗರಾಜ ಮಾಡಳ್ಳಿ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದು ಮಾರ್ಗದರ್ಶನ ನೀಡಿದರು. ಸಿಪಿಐ ನಾಗರಾಜ ಮಾಡಳ್ಳಿ, ಪಿಎಸ್‌ಐ ಈರಪ್ಪ ರಿತ್ತಿ, ಕ್ರೆöÊಂ ವಿಭಾಗದ ಪಿಎಸ್‌ಐ ಟಿ.ಕೆ. ರಾಥೋಡ ಹಾಗೂ ಸಿಬ್ಬಂದಿಗಳು ಬಂದೋಬಸ್ತ್ ಕಾರ್ಯವನ್ನು ಯಶಸ್ವಿಯಾಗಿ ನಿಭಾಯಿಸಿದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!