ಬಳ್ಳಾರಿಗೆ ಕಾಲಿಡುತ್ತಿದ್ದಂತೆ ಸಿದ್ದು ವಿರುದ್ಧ ಸ್ಪೋಟಕ ಹೇಳಿಕೆ ನೀಡಿದ ಜನಾರ್ಧನ್ ರೆಡ್ಡಿ: ಏನದು ಗೊತ್ತಾ!?

0
Spread the love

ಬಳ್ಳಾರಿ:- ಬಳ್ಳಾರಿಗೆ ಕಾಲಿಡುತ್ತಿದ್ದಂತೆ CM ಸಿದ್ದರಾಮಯ್ಯ ವಿರುದ್ಧ ಗಾಲಿ ಜನಾರ್ಧನ್ ರೆಡ್ಡಿ ಅವರು ಸ್ಪೋಟಕ ಹೇಳಿಕೆ ನೀಡಿದ್ದಾರೆ.

Advertisement

ಬಳ್ಳಾರಿಯಲ್ಲಿಂದು ಮಾತನಾಡಿರುವ ರೆಡ್ಡಿ, ಸಿದ್ದರಾಮಯ್ಯ 5 ಸಾವಿರ ಕೋಟಿ ರೂ. ಬೇನಾಮಿ ಆಸ್ತಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಕುಟುಂಬಸ್ಥರು, ಸಂಬಂಧಿಕರ ಮೂಲಕ ಐದು ಸಾವಿರ ಕೋಟಿ ರೂ. ಆಸ್ತಿ ಬೇನಾಮಿಯಾಗಿ ಮಾಡಿದ್ದಾರೆ. ಇದೆಲ್ಲ ತನಿಖೆ ಆಗಬೇಕು ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ಹಿಂದೆ ಮಾಡಿದ್ದನ್ನ ಈಗ ಅನುಭವಿಸಬೇಕಾಗಿದೆ. ಮೂಡಾ ಪ್ರಕರಣದಲ್ಲಿ ಕೇವಲ ಹದಿನಾಲ್ಕು ಸೈಟು, 62 ಕೋಟಿ ವಿಚಾರ ಅಲ್ಲ. ಹಿಂದೆ ಅಡ್ವಾಣಿ ಅವರು ಯಡಿಯೂರಪ್ಪ ಹಾಗೂ ನಮ್ಮೆಲರಿಗು ರಾಜಿನಾಮೆ ಕೊಡಲು ಒಂದೇ ಮಾತು ಹೇಳಿದಾಗ ನಾವೆಲ್ಲಾ ರಾಜಿನಾಮೆ ಕೊಟ್ಟು ಸರ್ಕಾರವನ್ನೇ ವಿಸರ್ಜನೆ ಮಾಡಿದ್ದೆವು. ಈಗ ಕಾಂಗ್ರೆಸ್‌ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ವಾಗ್ದಾಳಿ ನಡೆಸಿದರು.

ಬಳ್ಳಾರಿಯಲ್ಲಿ ಹಲವು ಸ್ಟೀಲ್ ಕಂಪನಿಗಳು ಬರಬೇಕಿತ್ತು. ಆದ್ರೆ ಸಿದ್ದರಾಮಯ್ಯ ಅದಕ್ಕೆ ಕಲ್ಲು ಹಾಕಿ, ಜನರ ಉದ್ಯೋಗ ಕಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟಿ ಕೋಟಿ ಹಣ ಲೂಟಿ ಆಗಿದೆ. ಸಿದ್ದರಾಮಯ್ಯ ಸದನದಲ್ಲಿ 180 ಕೊಟಿ ಅಲ್ಲ 82 ಕೋಟಿ ರೂ. ಎಂದು ಒಪ್ಪಿಕೊಂಡಿದ್ದಾರೆ.. ಇಲ್ಲಿ ಕೇವಲ ನಾಗೇಂದ್ರ ಮಾತ್ರ ಅಲ್ಲ, ಇಡೀ ಸರ್ಕಾರ ಭಾಗಿಯಾಗಿದೆ ಎಂದು ಆರೋಪಸಿದರು.

ಬಳ್ಳಾರಿಯಿಂದ ದೂರ ಇದ್ದು ನೋವು ಅನುಭವಿಸಿದ್ದೇನೆ. ಇವತ್ತು ನನ್ನ ಹುಟ್ಟೂರಿಗೆ ಮರಳಿದೆ ಎನ್ನುವ ಖುಷಿ ಇದೆ. ಬಳ್ಳಾರಿ ಜನರಿಗೆ ಎಂದೆಂದಿಗೂ ಚಿರರುಣಿಯಾಗಿರುವೆ. ಆ ದೇವರಿಗೆ ನಾನು ಒಂದೇ ಪ್ರಾರ್ಥನೆ ಮಾಡಿದ್ದೆ. ಬಳ್ಳಾರಿಗೆ ಹೋಗಿ ಜನಸೇವೆ ಮಾಡ್ಬೇಕೆಂದು ಪ್ರಾರ್ಥಿಸಿದ್ದೆ. ಸುಳ್ಳು ಆರೋಪ ಮಾಡಿ ನನ್ನ ತುಳಿಯುವ ಕೆಲಸ ಮಾಡಿದ್ರು. ಬಳ್ಳಾರಿಯನ್ನ ಅಭಿವೃದ್ಧಿ ಮಾಡುವುದು ನನ್ನ ಕೆಲಸ . ಇಲ್ಲಿನ ಜನರಿಗೆ ಉದ್ಯೋಗ ಸಿಗುವಂತೆ ಕೆಲಸ ಮಾಡುವೆ ಎಂದು ಭರವಸೆ ನೀಡಿದರು.


Spread the love

LEAVE A REPLY

Please enter your comment!
Please enter your name here