ರಾಮ ಮಂದಿರದಂತೆ ದತ್ತ ಮಂದಿರ ನಿರ್ಮಾಣವೇ ನಮ್ಮ ಸಂಕಲ್ಪ; ಸಂಸದೆ ಶೋಭಾ ಕರಂದ್ಲಾಜೆ

0
Spread the love

ವಿಜಯಸಾಕ್ಷಿ ಸುದ್ದಿ, ಚಿಕ್ಕಮಗಳೂರು

Advertisement

ಇಲ್ಲಿನ ದತ್ತಾತ್ರೇಯ ಪೀಠದ ದರ್ಶನ ಪಡೆದು ಕೊರೋನಾ ನಿರ್ಮೂಲನೆಗೆಗಾಗಿ ಸಂಸದೆ ಶೋಭಾ ಕರಂದ್ಲಾಜೆ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಮಾತನಾಡಿದ ಸಂಸದೆ,
ಅಯೋಧ್ಯೆಯ ರಾಮಮಂದಿರದಂತೆ ದತ್ತಪೀಠದಲ್ಲಿ ದತ್ತಮಂದಿರ ನಿರ್ಮಿಸಲಾಗುತ್ತದೆ.
ನಮ್ಮ ಸರ್ಕಾರದ ಅವಧಿಯಲ್ಲೇ ದತ್ತಪೀಠಕ್ಕೆ ಮುಕ್ತಿ ಸಿಗುತ್ತದೆ.
ಈ ಪೀಠದಲ್ಲಿ ದತ್ತಾತ್ರೇಯ ಮಂದಿರ ನಿರ್ಮಾಣವಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದತ್ತಪೀಠದ ಮುಕ್ತಿಗೆ ಕಾನೂನಿನ ಅಡೆತಡೆಗಳಿದ್ದು, ತಜ್ಞರು ಪರಿಶೀಲಿಸುತ್ತಿದ್ದಾರೆ. ಜಗತ್ತಿನಲ್ಲಿ ದತ್ತ ಭಕ್ತರಿದ್ದು, ಚಿಕ್ಕಮಗಳೂರಿನಲ್ಲಿ ದತ್ತಪಾದುಕೆ ಇದೆ. ದತ್ತಪೀಠ ನಮ್ಮದಾಗಬೇಕೆಂಬುವುದೇ ನಮ್ಮ ಸಂಕಲ್ಪ ಎಂದು ಸಂಸದೆ ಶೋಭಾ ಕರಂದ್ಲಾಜೆ ಶಪತಗೈದರು.


Spread the love

LEAVE A REPLY

Please enter your comment!
Please enter your name here