ಹುಬ್ಬಳ್ಳಿ: ಗುಂಡಿನ ದಾಳಿಗೈದು ದರೋಡೆಕೋರನ ಸೆರೆ ಹಿಡಿದ ಪೊಲೀಸರು!

0
Spread the love

ಹುಬ್ಬಳ್ಳಿ:- ಗುಂಡಿನ ದಾಳಿಗೈದು ದರೋಡೆಕೋರನನ್ನು ಗೋಕುಲ ರೋಡ್ ಪೊಲೀಸರು ಸೆರೆ ಹಿಡಿದ ಘಟನೆ ಹುಬ್ಬಳ್ಳಿಯಲ್ಲಿ ಜರುಗಿದೆ.

Advertisement

ಮಹೇಶ್ ಸೀತಾರಾಮ್ ಕಾಳೆ ಬಂಧಿತ ವ್ಯಕ್ತಿ ಆಗಿದ್ದಾನೆ. ಇಂದು ಬೆಳಿಗ್ಗೆ ಮಹೇಶ್ ಮತ್ತು ಈತನ ಗ್ಯಾಂಗ್‌ ಮನೆ ಕಳ್ಳತನಕ್ಕೆ ಇಳಿದಿತ್ತು. ವಿಚಾರ ತಿಳಿದು ಕಾರ್ಯಾಚರಣೆಗೆ ಇಳಿದ ಪೊಲೀಸರು ಆರೋಪಿ ಮಹೇಶ್​ ಸೀತಾರಾಮ್​​ನನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಉಳಿದವರು ಪರಾರಿಯಾದರು.

ಉಳಿದ ಡಕಾಯಿತರು ಇರುವ ಜಾಗ ತೋರಿಸುತ್ತೇನೆ ಅಂತ ಮಹೇಶ್ ಪೊಲೀಸರನ್ನು ಕರೆದುಕೊಂಡು ಹೋಗಿದ್ದಾನೆ. ಡಕಾಯಿತರು ಇದ್ದ ಸ್ಥಳಕ್ಕೆ ಹೋದ ಬಳಿಕ ಮಹೇಶ್​ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದಾನೆ.

ಪ್ರಾಣ ರಕ್ಷಣೆಗಾಗಿ ಗೋಕುಲ ರೋಡ್ ಪೊಲೀಸ್ ಠಾಣೆಯ ಪಿಎಸ್​ಐ ಸಚಿನ ದಾಸರೆಡ್ಡಿ ಮಹೇಶ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡು ತಿಂದು ನೋವಿನಿಂದ ಒದ್ದಾಡುತ್ತಿದ್ದ ಮಹೇಶ್​ನನ್ನು ಹುಬ್ಬಳ್ಳಿ ಕಿಮ್ಸ್​ಗೆ ದಾಖಲಿಸಲಾಗಿದೆ.


Spread the love

LEAVE A REPLY

Please enter your comment!
Please enter your name here