ಉಡುಪಿ:- ಹಾಸ್ಟೆಲ್ನಲ್ಲಿ ರಾತ್ರಿ ಬಾತ್ರೂಂಗೆ ಹೋದ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದು, ಸಾವಿನ ಬಗ್ಗೆ ಪೋಷಕರು ಸಂಶಯ ವ್ಯಕ್ತಪಡಿಸಿದ್ದಾರೆ.
Advertisement
ಮೃತ ಯುವಕನನ್ನು ಮಹಮ್ಮದ್ ಜಹೀದ್ ಎಂದು ತಿಳಿದು ಬಂದಿದೆ. ಸದ್ಯ ಮಗನ ಸಾವಿನ ಕುರಿತು ತಾಯಿ ರಿಹಾನ ಬೇಗಂ ಸಂಶಯ ವ್ಯಕ್ತಪಡಿಸಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಮೃತ ಮಹಮ್ಮದ್ ಜಹೀದ್ ಕಳೆದ ನಾಲ್ಕು ತಿಂಗಳಿಂದ ಮದರಸ ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದ. ಹೇರಾಡಿ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ.
ರಜೆಯಲ್ಲಿ ಮನೆಗೆ ತೆರಳಿದ್ದ ಜಹೀದ್ ರಜೆ ಮುಗಿಸಿ ಹಾಸ್ಟೆಲ್ ಮರಳಿದ್ದ. ರಾತ್ರಿ ವೇಳೆ ಮದರಸ ಹಾಸ್ಟೆಲ್ ಬಾತ್ರೂಮಿನಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.