ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ಜಿಟಿ ಜಿಟಿ ಮಳೆ: ವಾಹನ ಸವಾರರು ಹೈರಾಣು!

0
Spread the love

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ವರುಣ ಎಂಟ್ರಿ ಕೊಟ್ಟಿದ್ದು, ಕೆಲಸಕ್ಕೆ ಹೋಗುವ ಸಿಟಿ ಮಂದಿ ಹೈರಾಣಾಗಿದ್ದಾರೆ.

Advertisement

ಮೆಜೆಸ್ಟಿಕ್​, ಕಾರ್ಪೊರೇಷನ್​ ಸರ್ಕಲ್, ಶಾಂತಿನಗರ, ಕೆ.ಆರ್​.ಮಾರ್ಕೆಟ್​​​, ವಿಧಾನಸೌಧ, ಶಿವಾಜಿನಗರ, ಬಸವನಗುಡಿ, ಜಯನಗರ, ಶ್ರೀನಗರ, ಹನುಮಂತನಗರ, ತ್ಯಾಗರಾಜನಗರ, ಕೋರಮಂಗಲ, ರಿಚ್​ಮಂಡ್​ ಸರ್ಕಲ್​, ಮಲ್ಲೇಶ್ವರಂ, ಯಶವಂತಪುರ, ಪೀಣ್ಯ, ಜಾಲಹಳ್ಳಿ, ದಾಸರಹಳ್ಳಿ, ರಾಜಾಜಿನಗರ ಸೇರಿದಂತೆ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ.

ಮಳೆಯಿಂದಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ. ಕಚೇರಿಗೆ ತೆರಳುವವರಿಗೆ ಮಳೆ ರಗಳೆಯಾಗಿದೆ.

ಇನ್ನೂ ಮುಂದಿನ ಕೆಲವು ದಿನಗಳಲ್ಲಿ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಕ್ಟೋಬರ್ 15 ರಂದು, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.


Spread the love

LEAVE A REPLY

Please enter your comment!
Please enter your name here