ಬೆಂಗಳೂರು:- ಅಮ್ಮ ನಿಂದಿಸಿದಳೆಂದು ಮನನೊಂದ ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಜರುಗಿದೆ.
19 ವರ್ಷದ ಕಾವ್ಯ ನೇಣಿಗೆ ಶರಣಾದ ಯುವತಿ. ಈಕೆ ಖಾಸಗಿ ಕಾಲೇಜೊಂದರಲ್ಲಿ ಮೊದಲ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು.
ಅಮ್ಮ ನಿಂದಿಸಿದ್ದಕ್ಕೆ ಕೋಪಗೊಂಡು ವಿದ್ಯಾರ್ಥಿನಿ ನೇಣುಬಿಗಿದುಕೋಂಡು ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಚಾಮರಾಜಪೇಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



