ಚನ್ನಪಟ್ಟಣ ಚುನಾವಣಾ ಅಖಾಡ: ನಾಳೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ನಾಮಪತ್ರ ಸಲ್ಲಿಕೆ!

0
Spread the love

ಬೆಂಗಳೂರು:- ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಹೆಸರು ಅಂತಿಮವಾಗಿದೆ. ಅಳೆದು ತೂಗಿ ಲೆಕ್ಕ ಹಾಕಿದ ದಳಪತಿಗಳು ನಿಖಿಲ್ ಕುಮಾರಸ್ವಾಮಿ ಅವರಿಗೆ ಮಣೆ ಹಾಕಿದ್ದಾರೆ.

Advertisement

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ವಿರುದ್ಧ ನಿಖಿಲ್ ಎದುರಾಳಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರ ವಿರುದ್ಧ ಸ್ಪರ್ಧಿಸಿದ ಚುನಾವಣೆ ಅಂತೆಯೇ ಚನ್ನಪಟ್ಟಣ ಉಪಚುನಾವಣೆ ಕೂಡ ಹೈವೋಲ್ಟೇಜ್ ಕದನವಾಗಿ ಮಾರ್ಪಟ್ಟಿದೆ.

ಚನ್ನಪಟ್ಟಣ ಉಪಚುನಾವಣೆ ರಾಜಕೀಯದಲ್ಲಿ ಎಲ್ಲವೂ ನಿರೀಕ್ಷೆಯಂತೆ ನಡೆದಿದೆ. ಸಾಕಷ್ಟು ಹೈಡ್ರಾಮಾ, ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳ ನಡುವೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ. ಅಲ್ಲಿಗೆ ಚನ್ನಪಟ್ಟಣದಲ್ಲಿ ಯೋಗೇಶ್ವರ್-ನಿಖಿಲ್ ಕುಮಾರಸ್ವಾಮಿ ನಡ್ವೆ ನೇರಾನೇರ ಸ್ಟಾರ್‌ವಾರ್ ನಡೆಯಲಿದೆ.

ಇದೇ ವೇಳೆ 3ನೇ ಪ್ರಯತ್ನದಲ್ಲಿ ಚುನಾವಣಾ ಚಕ್ರವ್ಯೂಹ ಬೇಧಿಸುವ ಮಾತುಗಳನ್ನು ನಿಖಿಲ್ ಕುಮಾರಸ್ವಾಮಿ ಆಡಿದ್ರು. ಆದ್ರೆ, ನಿಖಿಲ್ ಸ್ಪರ್ಧೆ ನಮಗೆ ಮೊದಲೇ ಗೊತ್ತಿತ್ತು ಎಂದು ಸಿಎಂ ಹೇಳಿದ್ದಾರೆ. ನಾಳೆ ಬಿಜೆಪಿ-ಜೆಡಿಎಸ್ ನಾಯಕರ ಜೊತೆಗೂಡಿ ನಿಖಿಲ್ ಕುಮಾರಸ್ವಾಮಿ ಉಮೇದುವಾರಿಕೆ ಸಲ್ಲಿಸಲಿದ್ದಾರೆ.


Spread the love

LEAVE A REPLY

Please enter your comment!
Please enter your name here