ವಿಜಯಸಾಕ್ಷಿ ಸುದ್ದಿ, ಗದಗ : ಗದಗ ನಗರದ ಕಾಟನ್ ಸೇಲ್ಸ್ ಸೊಸೈಟಿಯ ಆವರಣದಲ್ಲಿ ಗುರುವಾರ ಕರ್ನಾಟಕ ರಾಜ್ಯ ಔಕಾಫ್ ಮಂಡಳಿಯ ಅಂಬುಲೆನ್ಸ್ನ್ನು ರಾಜ್ಯದ ಕಾನೂನು, ನ್ಯಾಯ, ಮಾನನ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ, ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಲೋಕಾರ್ಪಣೆಗೊಳಿಸಿದರು.
Advertisement
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ ಬಬರ್ಚಿ, ವ್ಯಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಪಿರಸಾಬ ಕೌತಾಳ, ಅಶೋಕ ಮಂದಾಲಿ ಸೇರಿದಂತೆ ಗಣ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.