ದೀಪಾವಳಿಗೆ ದಿನಗಣನೆ ಆರಂಭ: ಖಾಸಗಿ ಬಸ್ ಮಾಲೀಕರಿಗೆ ಸಾರಿಗೆ ಇಲಾಖೆ ಖಡಕ್ ಸೂಚನೆ!

0
Spread the love

ಬೆಂಗಳೂರು:- ದೀಪಾವಳಿಗೆ ದಿನಗಣನೆ ಆರಂಭವಾಗಿದ್ದು, ಊರಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಸಹಜವಾಗಿ ಏರಿಕೆ ಆಗಲಿದೆ. ಇದನ್ನೇ ಬಂಡವಾಳ ಮಾಡಿಕೊಳ್ಳುವ ಖಾಸಗಿ ಬಸ್ ಮಾಲೀಕರು, ಪ್ರಯಾಣಿಕರ ಬಳಿ ಹಣ ಪೀಕುವ ಕೆಲಸಕ್ಕೆ ಇಳಿಯುತ್ತಾರೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸಾರಿಗೆ ಇಲಾಖೆ ಮುಂದಾಗಿದೆ.

Advertisement

ದೀಪಾವಳಿ ಹಬ್ಬದ ಪ್ರಯುಕ್ತ ಆನ್ ಲೈನ್ ಮೂಲಕ ಟಿಕೆಟ್ ದರವನ್ನು ಹೆಚ್ಚಿಸಿದ್ರೆ ಕಠಿಣ ಕ್ರಮಕೈಗೊಳ್ಳುವುದಾಗಿ ಖಾಸ್ ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ರಾಜ್ಯ ಸಾರಿಗೆ ಇಲಾಖೆ, ದೀಪಾವಳಿ ಹಬ್ಬದ ಆನ್ ಲೈನ್ ಮೂಲಕ ಪ್ರಯುಕ್ತ ಟಿಕೆಟ್ ದರವನ್ನು ಹೆಚ್ಚಿಸಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಜನರಿಂದ ಸಾಮಾನ್ಯ ಟಿಕೆಟ್ ದರಕ್ಕಿಂತ ಹೆಚ್ಚು ಸಂಗ್ರಹಿಸಬಾರದು. ದುಪ್ಪಟ್ಟು ಹಣ ಸಂಗ್ರಹಿಸುವ ವಾಹನ ಮಾಲೀಕರ ಪರ್ಮಿಟ್ ಹಾಗೂ ನೋಂದಣಿ ಪತ್ರ ಅಮಾನತು ಮಾಡಲಾಗುವುದು ಎಂದು ಖಾಸಗಿ ಬಸ್ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ ಸಾರ್ವಜನಿಕ ಸೇವಾ ವಾಹನಗಳಲ್ಲಿ ಸ್ಪೋಟಕ ಸಾಮಗ್ರಿಗಳ ಸಾಗಾಣಿಕೆಗೆ ‌ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿರುವ ಸಾರಿಗೆ ಇಲಾಖೆ, ಖಾಸಗಿ ಬಸ್ ಗಳು ಹೆಚ್ಚಿನ ಟಿಕೆಟ್ ದರ ಸಂಗ್ರಹಿಸಿದ್ರೆ ಸಾರ್ವಜನಿಕರು ದೂರು ನೀಡುವಂತೆ ಮನವಿ ಮಾಡಿದೆ.

ನಿಯಂತ್ರಣ ಕೊಠಡಿ ಸಂಖ್ಯೆ-9449863429,9449863426 ಕೆರೆ ಮಾಡಿ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದು ರಾಜ್ಯ ಸಾರಿಗೆ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ.


Spread the love

LEAVE A REPLY

Please enter your comment!
Please enter your name here