ಬೆಂಗಳೂರು: ರಾಜ್ಯದಲ್ಲಿ ಈವರೆಗೆ 25 ಜನರು ಮಳೆಯಿಂದ ಮೃತಪಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆ ಹಾನಿ ಬಗ್ಗೆ ಡಿಸಿ, ಸಿಇಒಗಳು, ಎಸ್ಪಿಗಳ ಸಭೆ ಮಾಡಿದ್ದೇನೆ.
ಬೆಂಗಳೂರು ಸೇರಿ ಹಲವೆಡೆ ಹಿಂಗಾರು ಮಳೆಯಿಂದ ಹಾನಿಯಾಗಿದೆ. ಅಕ್ಟೋಬರ್ 1ರಿಂದ 25ರವರೆಗೆ 181 ಮೀ.ಮೀ ಅಂದರೆ ಅತೀ ಹೆಚ್ಚು ಮಳೆಯಾಗಿದೆ ಎಂದಿದ್ದಾರೆ.ರಾಜ್ಯದಲ್ಲಿ ಈವರೆಗೆ 25 ಜನರು ಮಳೆಯಿಂದ ಮೃತಪಟ್ಟಿದ್ದಾರೆ.
ಈ ಅವಧಿಯಲ್ಲಿ ಮಳೆಯಿಂದಾಗಿ 84 ಮನೆಗಳು ಸಂಪೂರ್ಣ ಹಾನಿಯಾಗಿದ್ದು, ರಾಜ್ಯದ ಹಲವೆಡೆ 2,074 ಮನೆಗಳು ಭಾಗಶಃ ಹಾನಿಗೀಡಾಗಿವೆ. ಪೂರ್ತಿ ಮನೆ ಹಾನಿಗೆ 1.20 ಲಕ್ಷ ರೂ. ಪರಿಹಾರ ನೀಡಬೇಕು.
ಸಣ್ಣಪುಟ್ಟ ಹಾನಿಯಾದರೆ 50 ಸಾವಿರ ರೂ. ಪರಿಹಾರ ಕೊಡುತ್ತೇವೆ. ಈ ಪರಿಹಾರ ನವೆಂಬರ್, ಅಕ್ಟೋಬರ್ ತಿಂಗಳಲ್ಲೂ ಅನ್ವಯ ಆಗಲಿದೆ. ಜತೆಗೆ ಮನೆ ನಿರ್ಮಾಣ ಮಾಡಲು ಈಗಾಗಲೇ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.