ಮೈಸೂರು: ಸಿಎಂ ಸಿದ್ದರಾಮಯ್ಯ ಒಬ್ಬ ಕೇರ್ʼಲೆಸ್ ಮನುಷ್ಯ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದ್ದಾರೆ. ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಮಾತನಾಡಿದರೆ ನಾನು ಅಕ್ಕಿ ಕೊಟ್ಟೆ, ಭಾಗ್ಯ ಕೊಟ್ಟೆ ಎಂದು ಹೇಳುವ ಸಿದ್ದರಾಮಯ್ಯ ರಾಜ್ಯದ ಅಭಿವೃದ್ಧಿಗೆ ಕುಂಠಿತವಾಗಿದ್ದಾರೆ. ನಿರೀಕ್ಷಿತ ಆಡಳಿತ ಕೊಡಲು ಅವರಿಂದ ಸಾಧ್ಯವಾಗುತ್ತಿಲ್ಲ ಎಂದ ವಿಶ್ವನಾಥ್,
ಕಾಂಗ್ರೆಸ್ ಪಕ್ಷವನ್ನ ಟೀಕಿಸುತ್ತಿದ್ದ ಸಿದ್ದರಾಮಯ್ಯ ಕಾಂಗ್ರೆಸ್ʼಗೆ ಬಂದದ್ದು ವಿಪರ್ಯಾಸ. ಸಿದ್ದರಾಮಯ್ಯ ಒಬ್ಬ ಕೇರ್ಲೆಸ್ ಮನುಷ್ಯ, ಇವರ ಬೇಜವಾಬ್ದಾರಿಯಿಂದಲೇ ಇಷ್ಟೊಂದು ಸಮಸ್ಯೆಗೆ ಸಿಲುಕಿಕೊಂಡಿದ್ದಾರೆ ಎಂದು ಹೆಚ್ ವಿಶ್ವನಾಥ್ ಹರಿಹಾಯ್ದರು.
ಇನ್ನೂ ರಾಜ್ಯದಲ್ಲಿ 3 ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ ಮೇಲೆ ಮುಡಾ, ವಾಲ್ಮೀಕಿ ನಿಗಮದ ಹಗರಣಗಳ ಕಾರ್ಮೋಡ ಕವಿದಿದೆ. ಸದ್ಯದಲ್ಲಿ ಚನ್ನಪಟ್ಟಣದಲ್ಲಿ ಜೆಡಿಎಸ್ಗೆ ಪೂರಕ ವಾತಾವರಣ ಇದೆ. ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ್ದಾನೆ. ಈತನಿಂದ ವಂಚನೆಗೆ ಒಳಗಾದವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಧೂಳಿಪಟವಾಗಲಿದೆ ಎಂದು ಎಂಎಲ್ಸಿ ಭವಿಷ್ಯ ನುಡಿದರು.