Bellary Central Jail: ಬೇಲ್ ಸಿಕ್ಕ ಬಳಿಕ ಪತಿ ದರ್ಶನ್ ಭೇಟಿಗೆ ಬಂದ ಪತ್ನಿ ವಿಜಯಲಕ್ಷ್ಮಿ!

0
Spread the love

ಬಳ್ಳಾರಿ: ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಸದ್ಯ ಈ ಸಂಬಂಧ ದರ್ಶನ್ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಬಳ್ಳಾರಿಗೆ ಜೈಲಿಗೆ ದರ್ಶನ್ ನೋಡಲು ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದಾರೆ.

Advertisement

ಬೇಲ್ ಸಿಕ್ಕ ಬೆನ್ನಲ್ಲೇ ಜೈಲಿಗೆ ಆಗಮಿಸಿದ ಪತ್ನಿಯನ್ನು ನೋಡಲು ಹೈ ಸೆಕ್ಯೂರಿಟಿ ಸೆಲ್‌ನಿಂದ ತೀವ್ರ ಬೆನ್ನು ನೋವಿನಿಂದಲೇ, ದರ್ಶನ್ ಆಗಮಿಸಿದ್ದಾರೆ.

ಜೈಲಿನ ಕೊಠಡಿಯಲ್ಲಿ ಕೆಲ ಕಾಲ ಮುಂದಿನ ಕಾನೂನು ಪ್ರಕ್ರಿಯೆ ಕುರಿತು ಪತ್ನಿ ಜೊತೆ ದರ್ಶನ್ ಚರ್ಚಿಸಿದ್ದಾರೆ. ಅಂದಹಾಗೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್‌ರನ್ನು ಜೂನ್ 11ರಂದು ಬಂಧಿಸಿದ್ದು, ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.


Spread the love

LEAVE A REPLY

Please enter your comment!
Please enter your name here