ಹಾಸನ:- ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆ ದರ್ಶನಕ್ಕೆ ಇಂದು ಕೊನೆ ದಿನವಾಗಿದೆ.
Advertisement
ಅಕ್ಟೋಬರ್ 24 ಗುರುವಾರ ಈ ದೇಗುಲದ ಬಾಗಿಲು ತೆರೆಯಲಾಗಿತ್ತು. ನಾಳೆ ದೇಗುಲದ ಬಾಗಿಲು ಮುಚ್ಚಲಾಗುತ್ತದೆ. ಹೀಗಾಗಿ, ಇಂದು ದೇವಿ ದರ್ಶನಕ್ಕೆ ಕೊನೆ ದಿನವಾಗಿದೆ.
ಈ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಿದ್ದು, ದೇವಿ ದರ್ಶನ ಪಡೆಯುತ್ತಿದ್ದಾರೆ. ಧರ್ಮದರ್ಶನದ ಸಾಲುಗಳು ಸಂಪೂರ್ಣ ಭರ್ತಿಯಾಗಿವೆ.
ಶುಕ್ರವಾರದಿಂದ ವಿವಿಐಪಿ ಹಾಗೂ ವಿಐಪಿ ಪಾಸ್ಗಳು ರದ್ದು ಮಾಡಲಾಗಿದೆ. ರವಿವಾರ ನಸುಕಿನ ಜಾವ 4 ಗಂಟೆವರೆಗೂ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಭಕ್ತಾದಿಗಳ ದಂಡೇ ಹರಿದು ಬರುತ್ತಿದೆ.