HomeKarnataka Newsಗೊಂದಲ ಸೃಷ್ಠಿ ಮಾಡಿದ್ದು ಸಿದ್ದರಾಮಯ್ಯ, ಬೆಂಕಿ ಹಚ್ಚಿದ್ದು ಜಮೀರ್: ಬಿ.ವೈ ವಿಜಯೇಂದ್ರ ಆರೋಪ

ಗೊಂದಲ ಸೃಷ್ಠಿ ಮಾಡಿದ್ದು ಸಿದ್ದರಾಮಯ್ಯ, ಬೆಂಕಿ ಹಚ್ಚಿದ್ದು ಜಮೀರ್: ಬಿ.ವೈ ವಿಜಯೇಂದ್ರ ಆರೋಪ

For Dai;y Updates Join Our whatsapp Group

Spread the love

ಚಿತ್ರದುರ್ಗ: ಗೊಂದಲ ಸೃಷ್ಠಿ ಮಾಡಿದ್ದು ಸಿದ್ದರಾಮಯ್ಯ, ಬೆಂಕಿ ಹಚ್ಚಿದ್ದು ಜಮೀರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಹಿಂದೂಗಳ ಆಸ್ತಿ, ರೈತರ ಜಮೀನು, ಮಠ ಮಾನ್ಯಗಳ ಆಸ್ತಿ ಕಬಳಿಸುವ ಕೆಲಸ ಆಗುತ್ತಿದೆ. ಆದ್ರೆ ಸಿಎಂ ಸಿದ್ಧರಾಮಯ್ಯ ಮೊಸಳೆ ಕಣ್ಣೀರು ಹಾಕ್ತಿದ್ದಾರೆ. ರೈತರಿಗೆ ನೀಡಿದ ನೋಟಿಸ್ ಹಿಂಪಡೆಯುವುದಾಗಿ ಹೇಳಿದ್ದಾರೆ. ತಾಕತ್ತಿದ್ದರೆ ಗೆಜೆಟ್ ನೋಟಿಫಿಕೇಷನ್ ಹಿಂಪಡೆಯಲಿ ಎಂದು ಸವಾಲ್‌ ಹಾಕಿದ್ದಾರೆ.

ಸಚಿವ ಜಮೀರ್ ಅಹ್ಮದ್ ಸಂವಿಧಾನದ ಬಗ್ಗೆ ಮಾತಾಡುತ್ತಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಗೂಂಡಾಗಿರಿ ಮಾಡಿ, ರೈತರ ಜಮೀನು, ಮಠಮಾನ್ಯಗಳ ಆಸ್ತಿ ಕಬಳಿಕೆ ಮಾಡಲಾಗುತ್ತಿದೆ. ವಕ್ಫ್ ಮೂಲಕ ಸಚಿವ ಜಮೀರ್ ಅಹ್ಮದ್ ಭೂಕಬಳಿಕೆ ಕೆಲಸ ಮಾಡ್ತಿದ್ದಾರೆ. ಅವರನ್ನ ಗಡಿಪಾರು ಮಾಡಿದ್ರೆ ಈ ರಾಜ್ಯಕ್ಕೆ ಒಳಿತು ಎಂದಿದ್ದಾರೆ.

ಇದೇ ವೇಳೆ ಕಾಂಗ್ರೆಸ್‌ ಸರ್ಕಾರದ ಆಡಳಿತದ ಕುರಿತು ಮಾತನಾಡಿ, ಸಿಎಂ ಯಾವುದೇ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಿಲ್ಲ. ಮತ್ತೊಂದು ಕಡೆ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಆಡಳಿತ ಪಕ್ಷದ ಶಾಸಕರೇ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿದೆ.

ಮೂರು ಕ್ಷೇತ್ರದಲ್ಲಿ ನಾವು ಗೆಲ್ಲುವ ವಾತಾವರಣ ಇದೆ. ಆದ್ದರಿಂದ ಸಿದ್ಧರಾಮಯ್ಯ ಆತಂಕದಲ್ಲಿ ಇದ್ದಾರೆ. ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆಂದು ಬೊಬ್ಬೆ ಹೊಡೀತಿದ್ದರು. ಈಗ ಸಿಎಂ ಕುಟುಂಬವೇ ಭ್ರಷ್ಟಾಚಾರದಲ್ಲಿ ಮುಳುಗಿದೆ. ಮುಡಾ ಹಗರಣದಿಂದ ಸಿದ್ಧರಾಮಯ್ಯ ಬಣ್ಣ ಬಯಲಾಗಿದೆ. ಇಡಿ ತನಿಖೆಯಿಂದ ಸತ್ಯಾಂಶ ಬಯಲಾಗಲಿದೆ. ಸಚಿವರ ಆಪ್ತ ಮುಡಾ ಕಮಿಷನರ್ ದಿನೇಶ್‌ ಓಡಿ ಹೋಗಿದ್ದಾನೆ. ವಾಲ್ಮೀಕಿ ಹಗರಣದ ಬಗ್ಗೆ ಸ್ವತಃ ಸಿಎಂ ಒಪ್ಪಿಕೊಂಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಇನ್ನೂ ಯತ್ನಾಳ್ ಏನೂ ಮಾತನಾಡ್ತಾರೆ, ಆ ಭಗವಂತನಿಗೆ ಗೊತ್ತು ಎಂದು ಯತ್ನಾಳ್ ವಿರುದ್ದ ವಿಜಯೇಂದ್ರ ಗುಡುಗಿದ್ದಾರೆ. ಯಡಿಯೂರಪ್ಪ ವೇದಿಕೆ ಮೇಲೆ ಹತ್ತಬಾರ್ದು ಎಂದು ಹೇಳಿದ್ದಾರೆ. ಯಡಿಯೂರಪ್ಪ 3-4 ದಶಕದಿಂದ ರಾಜ್ಯದಲ್ಲಿ ರೈತರ ಪರ ದ್ವನಿ ಎತ್ತಿದ ರೈತ ನಾಯಕನಾಗಿದ್ದು, ಯಡಿಯೂರಪ್ಪ & ಆನಂತ್ ಕುಮಾರ್ ಸೇರಿ ಹಲವರು ಪಕ್ಷ ಕಟ್ಟಿದ್ದಾರೆ. ಅವರು ಪಕ್ಷ ಕಟ್ಟಿಲ್ಲ ಅಂದರೆ ಕೆಲವರು ವೇದಿಕೆ ಕಟ್ಟುವ ಯೋಗ್ಯತೆ ಇರ್ತಾ ಇರ್ಲಿಲ್ಲ, ಆದ್ದರಿಂದ ಯಡಿಯೂರಪ್ಪ ಅವರ ಕೊಡುಗೆ ಏನೂ ಅಂತ ಅರ್ಥ ಮಾಡ್ಕೊಬೇಕು. ಮನ ಬಂದಂತೆ ಮಾತ್ನಾಡೋದು ಈಗಲಾದ್ರು ಬಿಡ್ಲಿ ಎಂದು ಯತ್ನಾಳ್ ವಿರುದ್ದ ವಿಜಯೇಂದ್ರ ಕಿಡಿಕಾರಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!