ಬೆಂಗಳೂರು:- ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯು ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ.
ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆಯ ಕುರಿತು ಸಿಬಿಐ ತನಿಖೆ ನಡೆಸಬೇಕು ಹಾಗೂ ವಿವಾದಕ್ಕೆ ಕಾರಣವಾದ ವಕ್ಫ್ ಖಾತೆ ಸಚಿವ ಜಮೀರ್ ಅಹಮದ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮತ್ತು ಎಲ್ಲ ತಾಲೂಕುಗಳ ತಾಲೂಕು ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಇನ್ನೂ ಸರ್ಕಾರದ ಸೂಚನೆ ನಂತರವೂ ಬಿಜೆಪಿ ಪ್ರತಿಭಟನೆಗೆ ಮುಂದಾಗಿರೋದಕ್ಕೆ ರಾಜಕೀಯ ಲಾಭದ ದುರುದ್ದೇಶ ಇದೆ. ರೈತರ ಹಿತಾಸಕ್ತಿ ರಕ್ಷಣೆಯ ಸದುದ್ದೇಶ ಇಲ್ಲ. ಇದನ್ನು ಅರ್ಥ ಮಾಡಿಕೊಳ್ಳಿ ಎಂದು ರಾಜ್ಯದ ಜನರನ್ನು ಸಿಎಂ ಕೋರಿದ್ದಾರೆ.
ಇನ್ನೂ ಬೊಮ್ಮಾಯಿ ಸಿಎಂ ಆಗಿದ್ದಾಗ ವಕ್ಫ್ ಪರ ನೀಡಿದ್ದ ಹೇಳಿಕೆಯನ್ನು ಹಂಚಿಕೊಂಡಿರೋ ಕಾಂಗ್ರೆಸ್, ಬಿಜೆಪಿಗೆ ಟಕ್ಕರ್ ಕೊಟ್ಟಿದೆ. ಇದಕ್ಕೆ ಬಿಜೆಪಿಯವರು ಏನಂತಾರೆ ಎಂದು ಪ್ರಶ್ನಿಸಿದೆ.