ದೀಪಾವಳಿ ಮುಗಿಸಿ ಬೆಂಗಳೂರಿಗೆ ಮರಳುತ್ತಿರುವ ಸಿಟಿ ಮಂದಿ: ಎಲ್ಲೆಲ್ಲೂ ಟ್ರಾಫಿಕ್ ಜಾಮ್!

0
Spread the love

ಬೆಂಗಳೂರು:- ದೀಪಾವಳಿ ಹಬ್ಬಕ್ಕೆಂದು ತಮ್ಮ ಊರುಗಳಿಗೆ ತೆರಳಿದ್ದ ಸಿಟಿ ಮಂದಿ ವಾಪಸ್ ಬೆಂಗಳೂರಿಗೆ ವಾಪಸ್ ಆಗಿದ್ದು, ನಗರದೆಲ್ಲೆಡೆ ಟ್ರಾಫಿಕ್ ಉಂಟಾಗಿದೆ.

Advertisement

ಬೆಂಗಳೂರು-ತುಮಕೂರು ರಸ್ತೆ, ಕೆ.ಆರ್ ಪುರಂ ಮುಖ್ಯರಸ್ತೆ ಹಾಗೂ ಗೊರಗುಂಟೆಪಾಳ್ಯದಿಂದ ಗೋವರ್ಧನ್‌ ವೃತ್ತದ ವರೆಗೂ ಫುಲ್‌ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಭಾನುವಾರ ತಡರಾತ್ರಿಯಿಂದಲೇ ಟ್ರಾಫಿಕ್‌ ಜಾಮ್‌ ಸಮಸ್ಯೆ ಉಂಟಾಗಿದ್ದು, ಇದರಿಂದ ಅನ್ಯಜಿಲ್ಲೆಯ ಉದ್ಯೋಗಿಗಳು ಪರದಾಡುವಂತಾಗಿದೆ.

ದೀಪಾವಳಿ ರಜೆ ಮುಗಿಸಿ ಬೆಂಗಳೂರಿನತ್ತ ಜನ ದಾಂಗುಡಿ ಇಡುತ್ತಿದ್ದಾರೆ. ಹೀಗಾಗಿ ತುಮಕೂರು ರಸ್ತೆಯಲ್ಲಿ ಜನರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಟ್ರಾಫಿಕ್‌ಗೆ ಬೇಸತ್ತು ನಾಗಸಂಧ್ರ ಮೆಟ್ರೋ ನಿಲ್ದಾಣದ ಬಳಿ ಇಳಿದು ಜನ ಮೆಟ್ರೋ ಸಂಚಾರದ ಮೊರೆ ಹೋಗುತ್ತಿದ್ದಾರೆ. ಈ ಹಿನ್ನಲೆ ನಾಗಸಂಧ್ರ ಮೆಟ್ರೋ ನಿಲ್ದಾಣ ಫುಲ್ ರಶ್ ಆಗಿದೆ.

ನಗರದ ಗೊರಗುಂಟೆಪಾಳ್ಯದ ಬಳಿಯೂ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಗೊರಗುಂಟೆಪಾಳ್ಯದಿಂದ ಗೋವರ್ಧನ್‌ ವೃತ್ತದ ವರೆಗೆ ಫುಲ್‌ ಟ್ರಾಫಿಕ್‌ ಜಾಮ್‌ ಉಂಟಾಗಿದೆ.


Spread the love

LEAVE A REPLY

Please enter your comment!
Please enter your name here