ಗದಗ: ಲ್ಯಾಂಡ್ ಜಿಹಾದ್ ಹಾಗೂ ವಕ್ಫ್ ಬೋರ್ಡ್ ಅಕ್ರಮ ವಿರುದ್ಧ ಗದಗ ನಗರದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ಜಿಲ್ಲಾ ಮುಖಂಡ ವಿಜಯಕುಮಾರ್ ಗಡ್ಡಿ ಸೇರಿದಂತೆ ಮುಖಂಡರ ನೇತೃತ್ವದಲ್ಲಿ ಗದಗ ನಗರದ ಮಹಾತ್ಮಾ ಗಾಂಧಿ ಸರ್ಕಲ್ನಿಂದ ತಹಶೀಲ್ದಾರ್ ಕಚೇರಿಯವರಿಗೆ ಪಾದಯಾತ್ರೆ ನಡೆಸುವ ಮೂಲಕ ಬಿಜೆಪಿ ಕಾರ್ಯಕರ್ತರು ತಹಶೀಲ್ದಾರ್ ಕಚೇರಿಗೆ ನುಗ್ಗಿದ್ದಾರೆ.
Advertisement
ತಹಶೀಲ್ದಾರ್ ಕಚೇರಿಗೆ ನುಗ್ಗುವ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ನೂಕಾಟಾ ತಳ್ಳಾಟ ಸಂಭವಿಸಿದ್ದು, ಕೆಲಕಾಲ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಕಾರ್ಯಕರ್ತರನ್ನು ತಡೆಯಲು ಪೊಲೀಸರ ಹರಸಹಾಸ ಪಟ್ಟಿದ್ದು, ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.