ಯಾದಗಿರಿ:- ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಗ್ರಾಮದ ಬಳಿಯ ಕೃಷ್ಣಾ ನದಿಯಲ್ಲಿ ನದಿಯಲ್ಲಿ ಸ್ನಾನ ಮಾಡುವಾಗ ಕಾಲು ಜಾರಿ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
26 ವರ್ಷದ ಮಂಗಳೇಶ ಬಡಿಗೇರ್ ಮೃತ ಯುವಕ. ಜಿಲ್ಲೆಯ ತಿಂಥಣಿ ಗ್ರಾಮಕ್ಕೆ ಸಂಬಂಧಿಕರ ಜವಳ ಕಾರ್ಯಕ್ರಮಕ್ಕೆ ಮಂಗಳೇಶ ಬಂದಿದ್ದ. ತಿಂಥಣಿ ಮೌನೇಶ್ವರ ದೇವಸ್ಥಾನದಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಕೃಷ್ಣಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ. ಸ್ನಾನ ಮಾಡುವಾಗ ಕಾಲು ಜಾರಿದ್ದು, ನೀರು ಪಾಲಾಗಿದ್ದಾನೆ.
ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸರು ಆಗಮಿಸಿದ್ದು, ಸ್ಥಳೀಯ ಅಂಬಿಗರ ಸಹಾಯದಿಂದ ಸತತ ಮೂರು ಗಂಟೆಗಳ ಶೋಧ ಕಾರ್ಯ ನಡೆಸಿ, ಮೃತ ದೇಹವನ್ನು ಹೊರತೆಗೆದಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸುರಪುರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.