ಅಕ್ರಮ ಸಂಬಂಧಕ್ಕೆ ಅಡ್ಡಿ: ಇಬ್ಬರು ಲವರ್ ಜೊತೆ ಸೇರಿ ತಾಳಿ ಕಟ್ಟಿದ ಗಂಡನನ್ನೇ ಕೊಲೆಗೈದ ಹೆಂಡ್ತಿ!

0
Spread the love

ಮೈಸೂರು:- ಅಕ್ರಮ ಸಂಬಂಧಕ್ಕೆ ಅಡ್ಡಿ ಹಿನ್ನೆಲೆ, ಇಬ್ಬರು ಲವರ್ ಜೊತೆ ಸೇರಿ ತಾಳಿ ಕಟ್ಟಿದ ಗಂಡನನ್ನೇ ಪತ್ನಿ ಕೊಲೆಗೈದಿರುವ ಘಟನೆ ನಂಜನಗೂಡು ತಾಲ್ಲೂಕಿನ ಮಡುವಿಹಳ್ಳಿಯಲ್ಲಿ ನಡೆದಿದೆ.

Advertisement

ಪತ್ನಿ ರಾಜೇಶ್ವರಿ ಸೇರಿ ಇಬ್ಬರು ಪ್ರಿಯಕರರಾದ ರಂಗಸ್ವಾಮಿ, ಶಿವಯ್ಯ ಬಂಧಿತರು. 43 ವರ್ಷದ ಸದಾಶಿವ ಎಂಬ ವ್ಯಕ್ತಿಯನ್ನು ಸರ್ಕಾರಿ ಶಾಸಲೆಯ ಬಳಿ ಕೊಲೆಯಾಗಿತ್ತು. ಪತ್ನಿ ರಾಜೇಶ್ವರಿ ಹಾಗೂ ತನ್ನಿಬ್ಬರು ಗೆಳೆಯರಾದ ರಂಗಸ್ವಾಮಿ, ಶಿವಯ್ಯ ಎನ್ನುವರ ಜೊತೆ ಸೇರಿಕೊಂಡು ಪತಿಯನ್ನೇ ಕೊಂದಿದ್ದಳು.

ಬಳಿಕ ವಾಮಾಚಾರಕ್ಕಾಗಿ ಕೊಲೆ ಮಾಡಲಾಗಿದೆ ಎಂದು ಬಿಂಬಿಸಿ ರಾಜೇಶ್ವರಿ ಬಿಕ್ಕಿಬಿಕ್ಕಿ ಅತ್ತಿದ್ದಳು. ಆದ್ರೆ, ಪೊಲೀಸರು ತನಿಖೆ ನಡೆಸಿದಾಗ ಪತ್ನಿಯ ನವರಂಗಿಯಾಟ ಬಯಲಿಗೆ ಬಂದಿದೆ.

ತನ್ನ ರಂಗಿನಾಟಕ್ಕೆ ಪತಿ ಅಡ್ಡ ಬರ್ತಾನೆ ಎಂದು ತಿಳಿದ ಪತ್ನಿ ವಾಮಾಚಾರದ ಹೆಸರಲ್ಲಿ ಪತಿಕೊಂದು ಕಥೆ ಕಟ್ಟಿ ಸಿಕ್ಕಿಬಿದ್ದಿದ್ದಾಳೆ. ಅಂದ ಹಾಗೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದನ್ನ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here