ಬೆಂಗಳೂರು: ತೆರೆದ ಪುಸ್ತಕ ಎಂದವರು ಲೋಕಾಯುಕ್ತ ವಿಚಾರಣೆಗೆ ಹೋಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸರ್ಕಾರದಲ್ಲಿ ಪ್ರತಿ ನಿತ್ಯ ಒಬ್ಬರಲ್ಲ ಒಬ್ಬ ಸಚಿವರು ಲೂಟಿ ಹೊಡೆಯುತ್ತಿದ್ದಾರೆ. 40 ವರ್ಷದ ರಾಜಕೀಯ ಜೀವನ ತೆರೆದ ಪುಸ್ತಕ ಎಂದಿದ್ದರು. ತೆರೆದ ಪುಸ್ತಕ ಎಂದವರು ಲೋಕಾಯುಕ್ತ ವಿಚಾರಣೆಗೆ ಹೋಗಿದ್ದಾರೆ. ಮುಖ್ಯಮಂತ್ರಿ ಆಗಿ ವಿಚಾರಣೆ ಎದುರಿಸುತ್ತಿದ್ದಾರೆ,
Advertisement
ನಾಚಿಕೆ ಆಗಲ್ವಾ ಎಂದು ಅಶೋಕ್ ಪ್ರಶ್ನಿಸಿದರು. ಬೆಳಗ್ಗೆ ವಿಚಾರಣೆ ಅಂತೆ, ಮಧ್ಯಾಹ್ನ ಪ್ರಚಾರ ಅಂತೆ. ಸಿಎಂ ಮೊದಲೇ ಟೈಮ್ ಫಿಕ್ಸ್ ಮಾಡಿಕೊಂಡು ಹೋಗಿದ್ದಾರೆ. ಇದೇನು ಮ್ಯಾಚ್ ಫಿಕ್ಸಿಂಗ್ ಕೇಸಾ, ತನಿಖಾಧಿಕಾರಿಗಳು ಎಷ್ಟು ಹೊತ್ತು ವಿಚಾರಣೆ ನಡೆಸ್ತಾರೆಂದು ಗೊತ್ತಾ? ಇವರೇ ಲೋಕಾಯುಕ್ತ ವಿಚಾರಣೆಗೆ ಸಮಯ ನಿಗದಿ ಮಾಡಿದ್ದಾರಾ ಎಂದು ಅಶೋಕ್ ವಾಗ್ದಾಳಿ ನಡೆಸಿದರು.