ಬೆಂಗಳೂರು:- ಹೃದಯಾಘಾತದಿಂದ BMTC ಡ್ರೈವರ್ ಸಾವನ್ನಪ್ಪಿರುವ ಘಟನೆ ರಾಜಧಾನಿ ಬೆಂಗಳೂರಿನ ಯಶವಂತಪುರ ಬಳಿ ಘಟನೆ ಜರುಗಿದೆ. ಬಸ್ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಇರುವಾಗಲೇ ಈ ದುರ್ಘಟನೆ ಸಂಭವಿಸಿದೆ.
Advertisement
39 ವರ್ಷದ ಕಿರಣ್ ಮೃತಪಟ್ಟ ಡ್ರೈವರ್ ಎನ್ನಲಾಗಿದೆ. ನೆಲಮಂಗಲ ಕಡೆಯಿಂದ ಯಶವಂತಪುರ ಕಡೆಗೆ ಬಿಎಂಟಿಸಿ ಬಸ್ ಅನ್ನು ಚಾಲನೆ ಮಾಡಿಕೊಂಡು ಬರುವಾಗ ಡ್ರೈವರ್ಗೆ ಎದೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ತಕ್ಷಣವೇ ಬಸ್ ನಿಲ್ಲಿಸಿದ್ದನು.
ಎದೆನೋವು ತೀವ್ರವಾಗಿ ಕಾಣಿಸಿಕೊಂಡು ಹೃದಯಾಘಾತದಿಂದ ಡ್ರೈವರ್ ಸಾವನ್ನಪ್ಪಿದ್ದಾನೆ. ಈ ವೇಳೆ ಬಸ್ನಲ್ಲಿ 50ಕ್ಕೂ ಪ್ರಯಾಣಿಕರಿದ್ದು ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದು ಬಂದಿದೆ.