HomePolitics Newsಚಿಕ್ಕಮಗಳೂರು ಜನ ಉಗಿದಿದ್ದಕ್ಕೆ ಅವರು ಯಶವಂತಪುರಕ್ಕೆ ಬಂದಿದ್ದು: ಕರಂದ್ಲಾಜೆ ವಿರುದ್ಧ ಎಸ್ ಟಿ ಸೋಮಶೇಖರ್ ಕಿಡಿ

ಚಿಕ್ಕಮಗಳೂರು ಜನ ಉಗಿದಿದ್ದಕ್ಕೆ ಅವರು ಯಶವಂತಪುರಕ್ಕೆ ಬಂದಿದ್ದು: ಕರಂದ್ಲಾಜೆ ವಿರುದ್ಧ ಎಸ್ ಟಿ ಸೋಮಶೇಖರ್ ಕಿಡಿ

For Dai;y Updates Join Our whatsapp Group

Spread the love

ಬೆಂಗಳೂರು: ಚಿಕ್ಕಮಗಳೂರು ಜನ ಉಗಿದಿದ್ದಕ್ಕೆ ಅವರು ಯಶವಂತಪುರ ಬರಬೇಕಾಯಿತು ಎಂದು ಶಾಸಕ ಎಸ್ ಟಿ ಸೋಮಶೇಖರ್ ಶೋಭಾ ಕರಂದ್ಲಾಜೆ ವಿರುದ್ಧ ಕಿಡಿಕಾರಿದ್ದಾರೆ. ಶೋಭಾ ಕರಂದ್ಲಾಜೆ ತಮ್ಮ ವಿರುದ್ಧ ಮಾಡಿರುವ ಹೇಳಿಕೆ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು,

ಇಬ್ಬರೂ ಯಶವಂತಪುರದಲ್ಲಿ ಸ್ಪರ್ಧೆ ಮಾಡೋಣ, ಜನ ತಿರ್ಮಾನ ತೆಗೆದುಕೊಳ್ಳುತ್ತಾರೆ, ಅಗ ಯಾರ ತಾಕತ್ತು ಎಷ್ಟು ಅನ್ನೋದು ಗೊತ್ತಾಗುತ್ತದೆ, ಚಿಕ್ಕಮಗಳೂರು ಜನ ಉಗಿದಿದ್ದಕ್ಕೆ ಅವರು ಯಶವಂತಪುರ ಬರಬೇಕಾಯಿತು, ತಮ್ಮ ಕೆಲಸ ತಾವು ಮಾಡಿಕೊಂಡು ಸುಮ್ಮನಿರದಿದ್ದರೆ ಅವರ ಪಾಪದ ಕೊಡ ತುಂಬುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಪರ ಮತ ಯಾಚಿಸುತ್ತಿರುವುದನ್ನು ಅವರು ಸಮರ್ಥಿಸಿಕೊಂಡಿದ್ದಾರೆ. ಚನ್ನಪಟ್ಟಣ ನನ್ನ ಹುಟ್ಟೂರು, ಅಲ್ಲಿ ಯಾರಾದರೂ ಸಲಹೆ ಕೇಳಿದರೆ ಕೊಡುತ್ತೇನೆ, ಯೋಗೇಶ್ವರ್ ಗೆ ಬಿಜೆಪಿಯಲ್ಲಿ ಅನ್ಯಾಯವಾಗಿದೆ ಎಂದು ಹೇಳಿದ್ದಾರೆ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!