ಕನಕಪುರ:- ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಹುಲಿಬೆಲೆ ಬಳಿ ಜರುಗಿದೆ.
Advertisement
ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ. ಲಾರಿ ಗುದ್ದಿದ ರಭಸಕ್ಕೆ ಕಾರಿನಲ್ಲೇ ಮೃತದೇಹಗಳು ಛಿದ್ರವಾಗಿವೆ. ಮೃತರ ಗುರುತು ಪತ್ತೆ ಆಗಿಲ್ಲ. ಘಟನಾ ಸ್ಥಳಕ್ಕೆ ಕನಕಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಸಂಗಮದಿಂದ ಕನಕಪುರ ಕಡೆಯಿಂದ ಕಾರು ಬಂದಿದ್ದು, ಸಂಗಮದ ಕಡೆ ಸರಕು ಲಾರಿ ತೆರಳುತ್ತಿತ್ತು. ಈ ವೇಳೆ ಅತಿಯಾದ ವೇಗದಿಂದ ಅಪಘಾತ ಸಂಭವಿಸಿದೆ. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಕನಕಪುರ ಆಸ್ಪತ್ರೆಗೆ ಮೃತದೇಹಗಳು ಶಿಫ್ಟ್ ಮಾಡಲಾಗಿದೆ.
ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.